ತೊಗಟವೀರ ಸಮಾಜದ ಬಂಧುಗಳು ಸಂಘಟಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬಂದು ಸಾಧನೆ ಮಾಡಿ ಶಿಕ್ಷಣ ತಜ್ಞ ಕೆ. ಆರ್.ಪುಟ್ಟಸ್ವಾಮಿ ಕರೆ… ನೇಕಾರ ತೊಗಟವೀರ ಸಮಾಜವು ಹೊರ ತಂದಿರುವ 2026ನೇ ನೂತನ ವರ್ಷದ ದಿನದರ್ಶಿಕೆಯನ್ನು ಶಿಕ್ಷಣ ತಜ್ಞ ಕೆ.ಆರ್.ಪುಟ್ಟಸ್ವಾಮಿ ಬಿಡುಗಡೆ ಮಾಡಿದರು.
ಪಂಚಾಂಗ ಹಬ್ಬ ಹರಿದಿನಗಳು ಸೇರಿದಂತೆ ನೇಕಾರ ತೊಗಟವೀರ ಸಮಾಜದ ಬಂಧುಗಳ ವಿವರವಾದ ಮಾಹಿತಿಗಳನ್ನು ಒಳಗೊಂಡಿರುವ 2026 ನೇ ಸಾಲಿನ ದಿನದರ್ಶಿಕೆಯು ವೈವಿಧ್ಯಮಯವಾಗಿ ಮೂಡಿ ಬಂದಿದ್ದು ಸಮಾಜದ ಬಂಧುಗಳು ಹಬ್ಬ ಹರಿದಿನಗಳು ಮತ್ತು ಸೂರ್ಯ, ಚಂದ್ರಗ್ರಹಣ ರಾಹುಕಾಲ, ಗುಳಿಕ ಕಾಲದ ಬಗ್ಗೆ ತಿಳಿದುಕೊಳ್ಳಲು ಈ ಕ್ಯಾಲೆಂಡರ್ ಅನ್ನು ಬಳಕೆ ಮಾಡಿಕೊಳ್ಳುವ ಮೂಲಕ ಜೀವನದಲ್ಲಿ ಅಭಿವೃದ್ಧಿ ಪಥದತ್ತ ಮುನ್ನಡೆಯಲು ಪ್ರತಿದಿನವೂ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಹೆಜ್ಜೆ ಹಾಕಬೇಕು ಎಂದು ಕೆ.ಆರ್. ಪುಟ್ಟಸ್ವಾಮಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉದ್ಯಮಿಗಳಾದ ಹೊನ್ನಾವರ ಚಂದ್ರಶೇಖರ್, ಕೆಹೆಚ್ ಆರ್ ಚಂದ್ರಶೇಖರ್, ವಿಶ್ರಾಂತ ಪೊಲೀಸ್ ಅಧಿಕಾರಿ ಮಹದೇವಯ್ಯ ಕೆ.ಜಿ.ಕುಮಾರ್, ತರಕಾರಿ ಜಯರಾಮು, ಕೆ.ಎಂ. ಮಧುಸೂದನ್, ಮೈಲಾರಿ ರವಿ, ಕೆ.ಎಂ.ರವಿನಂದನ, ಶ್ರೀರಂಗಪಟ್ಟಣ ಕುಮಾರಸ್ವಾಮಿ, ಚಿಕ್ಕಗೊಂಡನಹಳ್ಳಿ ರಾಮಚಂದ್ರ, ಪುರಸಭೆ ಮಾಜಿ ಸದಸ್ಯ ಕೆ.ಆರ್. ನೀಲಕಂಠ ಸೇರಿದಂತೆ ನೂರಾರು ಸಮಾಜದ ಬಂಧುಗಳು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

More Stories
ಕೃಷ್ಣರಾಜಪೇಟೆ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿದ ಮುಸ್ಲಿಂ ಬಾಂಧವರು ..
ವಿದ್ಯಾರ್ಥಿಗಳು ಸೋಲನ್ನೇ ಗೆಲುವಿನ ಮೆಟ್ಟಿಲಾಗಿಸಿಕೊಂಡು ಸಾಧನೆ ಮಾಡಿ, ಅಂತಾರಾಷ್ಟ್ರೀಯ ಜಾನಪದ ಕಲಾವಿದ ಡಾ.ಅಮ್ಮ ರಾಮಚಂದ್ರ ಕರೆ.
ಶಿಕ್ಷಕರು ವಿದ್ಯಾರ್ಥಿಗಳನ್ನು ಕೇವಲ ಅಂಕವೀರರನ್ನಾಗಿ ರೂಪಿಸದೆ ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯ ಮೂಲಕ ಉತ್ತಮವಾದ ಸಂಸ್ಕಾರ ನೀಡಿ ಭವಿಷ್ಯದ ನಾಗರೀಕರನ್ನಾಗಿ ಸಜ್ಜುಗೊಳಿಸಬೇಕು. ಡಾ.ಪಿ. ಹರೀಶ್ ಕರೆ.