ಭಟ್ಕಳ ;ತಾಲೂಕಿನ ಬೆಳಕೆಯ ಮಯೂರ ದಾಬಾ ಎದುರು ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಹಿಂಬದಿ ಸವಾರನಾಗಿದ್ದ ಕುಂದಾಪುರ ತಾಲೂಕಿನ 11ನೇ ಉಳ್ಳೂರು ನಿವಾಸಿ ಮಹಾಬಲೇಶ್ವರ (ತಂದೆ: ವಾಸುದೇವ ಹೆಬ್ಬಾರ್) ಗಾಯಗೊಂಡಿದ್ದಾರೆ.
ಗ್ರಾಮೀಣ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ಶ್ರೀಪತಿ (ತಂದೆ: ನಾರಾಯಣ ಹೆಬ್ಬಾರ್) ಅವರ ಬೈಕ್ನಲ್ಲಿ ಭಟ್ಕಳದಿಂದ ಕುಂದಾಪುರದ ಕಡೆ ತೆರಳುತ್ತಿದ್ದ ವೇಳೆ, ಬೆಳಕೆಯ ಮಯೂರ ದಾಬಾ ಎದುರು ನಾಯಿ ಏಕಾಏಕಿ ಅಡ್ಡ ಬಂದಿತ್ತು. ಇದರಿಂದ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದು, ಮಹಾಬಲೇಶ್ವರ ಅವರಿಗೆ ಬಲಗಾಲಿನ ಜಾಯಿಂಟ್ ಸಮೀಪ ಗಾಯವಾಗಿದೆ.
ಘಟನೆಯ ಸಂಬಂಧ ಗ್ರಾಮೀಣ ಠಾಣೆ ಪೊಲೀಸರು ಬೈಕ್ ಸವಾರ ಶ್ರೀಪತಿ ಹೆಬ್ಬಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

More Stories
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶ್ರೀ ಅರುಣಾನಂದ ಸ್ವಾಮೀಜಿ ಸಾಂತ್ವನ
ಕಪ್ಪೆಚಿಪ್ಪು ದುರಂತದ ಮೃತರ ಮನೆಗಳಿಗೆ ಪ್ರಮೋದ್ ಮಧ್ವರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ
ಮೃತರ ಕುಟುಂಬಗಳಿಗೆ ಕಾಗೇರಿ ಸಾಂತ್ವನ