ಹೊನ್ನಾವರ; ತಾಲೂಕಿನ ಸಾಲ್ಕೋಡ್ ದೇವರಾಯ ಎಂ. ನಾಯ್ಕ ಇವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಕೊಠಡಿ ಹಾಗೂ ಗೃಹಬಳಕೆ ವಸ್ತುಗಳು ಸುಟ್ಟು ಕರಕಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಿಂಭಾಗದ ಬಾತರೂಂ ಭಾಗದಿಂದ ಬೆಂಕಿ ಕಿಡಿಯೊಂದು ಪ್ಲಾಸ್ಟಿಕ್ ಹೊದಿಕೆ ಮೇಲೆ ಇದ್ದ ಪರಿಣಾಮ, ಮನೆಯ ಅಡುಗೆ ಕೋಣೆ ಹಾಗೂ ಹೊಂದಿಕೊಂಡಿರುವ ಇನ್ನೊಂದು ಕೊಠಡಿಗೆ, ಬೆಂಕಿ ತಗುಲಿದ್ದು, ಮಿಕ್ಸಿ, ವಾಷಿಂಗ್ ಮಿಷನ್ ಸೇರಿದಂತೆ ವಿವಿಧ ಗೃಹಪಯೋಗಿ ವಸ್ತು, ಅಡುಗೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ.
ಮನೆಗೆ ಹೊಂದಿಕೊಂಡಿರುವ ಎರಡು ತೆಂಗಿನ ಮರಕ್ಕೂ ಹಾನಿಯಾಗಿದೆ. ಸ್ಥಳಿಯರ ಸಮಯಪ್ರಜ್ಞೆಯಿಂದ ಬೆಂಕಿ ವ್ಯಾಪಿಸದಂತೆ ನೋಡಿಕೊಂಡು, ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲೆಂಡರ್ ಸೇರಿದಂತೆ ಅನೇಕ ವಸ್ತುಗಳನ್ನು ಸುರಕ್ಷಿತವಾಗಿ ಹೊರತರಲಾಗಿದೆ. ನಂತರ ಅಗ್ನಿಶಾಮಕ ಸಿಬ್ಬಂದಿಗಳು ಸಂಪೂರ್ಣ ಬೆಂಕಿ ನಂದಿಸುವಲ್ಲಿ ನೆರವಾದರು. ಘಟನಾ ಸ್ಥಳಕ್ಕೆ ಗ್ರಾಮಲೆಕ್ಕಾಧಿಕಾರಿ ಸವಿತಾ ಕವಟಗಿ, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ