March 1, 2026

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ  ಸುಮೇಧಾ ಗಾಂವ್ಕರ್ ಪ್ರಥಮ

ಕುಮಟಾ: ರಾಷ್ಟ್ರೀಯ ಚುನಾವಣಾ ಆಯೋಗ 2025- 26ರಲ್ಲಿ ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ  ಡಾ.ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸುಮೇಧಾ ಗಾಂವ್ಕರ್ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.


ಬೆಂಗಳೂರಿನ ಪುಟ್ಟಣ್ಣ ಶೆಟ್ಟಿ ಪುರಭವನದಲ್ಲಿ ನಡೆದ  16ನೇ ರಾಷ್ಟ್ರೀಯ ಮತದಾರ ದಿನದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ  ರಾಜ್ಯದ ಘನವೆತ್ತ ರಾಜ್ಯಪಾಲರಾದ  ಥಾವರ್ ಚಂದ್ ಗೆಹಲೋಟ್ ಅವರಿಂದ ಪ್ರಶಸ್ತಿ ಪಡೆದರು. ಇದೆ ವೇಳೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನ್ಬು ಕುಮಾರ್ ಅವರಿಂದ ಸನ್ಮಾನವನ್ನು ಸ್ವೀಕರಿಸಿದ್ದಾರೆ. ಇವರ ಸಾಧನೆಗೆ ಕೆನರಾ ಕಾಲೇಜು ಸೊಸೈಟಿಯ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

About The Author

error: Content is protected !!