ಹೊನ್ನಾವರ : ತಾಲೂಕಾ ಕಾನೂನು ನೆರವು ಸಮಿತಿ, ವಕೀಲರ ಸಂಘ, ಅಭಿಯೋಜನೆ ಇಲಾಖೆ ಹಾಗೂ ತಾಲೂಕಾಡಳಿತ ಹೊನ್ನಾವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆಯ

ನ್ನು ಶರಾವತಿ ಎಗ್ರೋ ಟೆಕ್ ಪ್ರೈ. ಲೀ., ಆವರಣದಲ್ಲಿ ಸೋಮವಾರ ನಡೆಯಿತು.
ಹೊನ್ನಾವರ ಸಿವಿಲ್ ನ್ಯಾಯಾಧೀಶ ಬಿ.ಸಿ ಚಂದ್ರಶೇಖರ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ ಪ್ರವೀಣ ಕರಾಂಡೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಹಾಯಕ ಸರ್ಕಾರಿ ಅಭಿಯೊಜಕಿ ಸಂಪದಾ ಗುನಗಾ, ಜೀತ ಪದ್ದತಿ ನಿರ್ಮೂಲನಾ ಕಾಯ್ದೆಯ ಕುರಿತು ಉಪನ್ಯಾಸ ನೀಡಿದರು.
ಜೆ.ಎಂ ಎಫ್ ಸಿ ನ್ಯಾಯಾಧೀಶ ಅನಿಲ್ ಜೋನ್ ಸಿಕ್ವೇರಾ, ಪ.ಪಂ ಮುಖ್ಯಾಧಿಕಾರಿ ಎಸು ಸುಬ್ರಹ್ಮಣ್ಯ, ವಕೀಲರ ಸಂಘದ ಅಧ್ಯಕ್ಷ ವಿ.ಎಂ ಭಂಡಾರಿ, ಕಾರ್ಯದರ್ಶಿ ಉದಯ ನಾಯ್ಕ ಚಿತ್ತಾರ, ಶರಾವತಿ ಎಗ್ರೋ ಟೆಕ್ ಪ್ರೆöÊ. ಲೀ.,ನ ಮಾಲೀಕರಾದ ಗಿರೀಶ ಭಕ್ತ ವೇಧಿಕೆಯಲ್ಲಿ ಉಪಸ್ಥಿತರಿದ್ದರು.
ಯುವ ಜನ ಕ್ರೀಡಾಧಿಕಾರಿ ಸುಧೀಶ ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಹೊನ್ನಾವರದ ಎನ್. ಎಂ. ಗುರುಪ್ರಸಾದ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪ್ರದಾನ
ಅನಿಲಗೋಡ್ ಕಾಲುಸೇತುವೆ ಕುಸಿದು 2 ವರ್ಷ ಕಳೆದರೂ ಮರುನಿರ್ಮಾಣವಿಲ್ಲ: ನೂರಾರು ಗ್ರಾಮಸ್ಥರ ಸಂಕಷ್ಟ
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣ