March 2, 2026

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಹೊನ್ನಾವರ ಘಟಕದಿಂದ ಪ್ರತಿಭಟನೆ

ಹೊನ್ನಾವರ: ಕೇಂದ್ರ ಸರ್ಕಾರ ಮುಂಬರುವ ಅಧಿವೇಶನದಲ್ಲಿ ವಿದ್ಯುತ್ ಸುಧಾರಣಾ ಕಾಯ್ದೆ 2026 ನ್ನು ಜಾರಿಗೆ ತಂದು ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿದೆ ಎಂದು, ವಿದ್ಯುತ್ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ, “ಅಖಿಲ ಭಾರತ ವಿದ್ಯುತ್ ಇಂಜಿನಿಯರ್ ಮತ್ತು ನೌಕರರ ಒಕ್ಕೂಟದ ವತಿಯಿಂದ ರಾಷ್ಟ್ರದ್ಯಂತ ಮುಷ್ಕರ ಹಿನ್ನಲೆ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಹೊನ್ನಾವರ ಘಟಕದಿಂದ ಪ್ರತಿಭಟನೆ ನಡೆಸಿದರು.


ಕೇಂದ್ರ ಸರ್ಕಾರದ ವಿದ್ಯುತ್ ಖಾಸಗೀಕರಣ ನೀತಿಯ ವಿರುದ್ಧ ಮತ್ತು ಕೇಂದ್ರ ಕಾರ್ಮಿಕ ನೀತಿಗಳ ವಿರುದ್ಧ ಘೋಷಣೆ ಕೂಗುವ ಆಕ್ರೋಶ ವ್ಯಕ್ತಪಡಿಸಿದರು.‌ ಸಾಂಕೇತಿಕವಾಗಿ ಧರಣೆ ವ್ಯಕ್ತಪಡಿಸಿದರು.

ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

About The Author

error: Content is protected !!