ಹೊನ್ನಾವರ : ತಾಲೂಕಿನ ಗುಣವಂತೆಯ ಶಂಭುಲಿAಗೇಶ್ವರನ ಸನ್ನಿಧಿಯಲ್ಲಿ ಮುಂಜಾನೆಯಿAದಲೇ ಸಾವಿರಾರು ಭಕ್ತರು ಸರತಿ ಸಾರಿನಲ್ಲಿ ನಿಂತು ದೇವರ ದರ್ಶನವನ್ನು ಪಡೆದು ಪುನೀತರಾದರು. ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಶ್ರೀ ಎಂ ಎಸ್ ಹೆಗಡೆ ಗುಣವಂತೆಯವರು ಮಾತನಾಡಿ ದೇವಾಲಯದ ಮಹಿಮೆ ಹಿರಿಮೆಯನ್ನು ತಿಳಿಸುತ್ತಾ ಖ್ಯಾತ ಉದ್ಯಮಿ ಮುರುಡೇಶ್ವರದ ಶ್ರೀ ಸುನಿಲ್ ಶೆಟ್ಟಿಯವರು ಈ ದೇವಾಲಯವನ್ನು ಪುನರ್ ನಿರ್ಮಾಣ ಮಾಡಿದ್ದು ಇದೇ ಬರುವ ಏಪ್ರಿಲ್ 12ರಂದು ಅಷ್ಟಬಂಧ, ಬ್ರಹ್ಮಕಲಶೋತ್ಸವ ಹಾಗೂ 18ರಂದು ಜಾತ್ರಾ ಮಹೋತ್ಸವ ಜರುಗಲಿದ್ದು ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ ಎಂದರು.

ಆಡಳಿತ ಮಂಡಳಿಯ ಅಧ್ಯಕ್ಷ ಡಾ ನರಸಿಂಹ ಪಂಡಿತ ನಿಲೇಕೇರಿ, ಉಪಾಧ್ಯಕ್ಷರಾದ ಎಂ ವಿ ಹೆಗಡೆ ಕೆರೆಮನೆ,ಶಿವಾನಂದ ಗೌಡ ಅಡಿಮನೆ, ಕೋಶಾಧಿಕಾರಿ ಗೋವಿಂದ ಗೌಡ, ಧರ್ಮ ನಾಯ್ಕ, ನಾಗರಾಜ ಭಂಡಾರಿ ಮೊದಲಾದವರು ಉಪಸ್ಥಿತರಿದ್ದು ದೇವರ ಸುಗಮ ದರ್ಶನಕ್ಕೆ ಅನುವು ಮಾಡಿಕೊಟ್ಟರು.

More Stories
ಹೊನ್ನಾವರದಲ್ಲಿ ಸಂಭ್ರಮದ “ಪತ್ರಿಕಾ ದಿನಾಚರಣೆ”: ಸಾಧಕರಿಗೆ ಸನ್ಮಾನ; ಮಾಧ್ಯಮದ ಸವಾಲುಗಳ ಕುರಿತು ಗಂಭೀರ ಚಿಂತನೆ
ಹೊನ್ನಾವರದ ಯುವಕನ ಜಾಗತಿಕ ಸಾಧನೆ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮಿಂಚಿ NVIDIA ಕಂಪನಿಯಲ್ಲಿ ವಾರ್ಷಿಕ ₹2.60 ಕೋಟಿ ಪ್ಯಾಕೇಜ್ ಪಡೆದ ಪೃಥ್ವಿರಾಜ್!
ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ: ಸುರಕ್ಷತೆ ಬಗ್ಗೆ ದೇವರಾಜ ಅರಸು ವಿಚಾರ ವೇದಿಕೆ ತೀವ್ರ ಕಳವಳ