ಹೊನ್ನಾವರ : ತಾಲೂಕಿನ ಗುಣವಂತೆಯ ಶಂಭುಲಿAಗೇಶ್ವರನ ಸನ್ನಿಧಿಯಲ್ಲಿ ಮುಂಜಾನೆಯಿAದಲೇ ಸಾವಿರಾರು ಭಕ್ತರು ಸರತಿ ಸಾರಿನಲ್ಲಿ ನಿಂತು ದೇವರ ದರ್ಶನವನ್ನು ಪಡೆದು ಪುನೀತರಾದರು. ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಶ್ರೀ ಎಂ ಎಸ್ ಹೆಗಡೆ ಗುಣವಂತೆಯವರು ಮಾತನಾಡಿ ದೇವಾಲಯದ ಮಹಿಮೆ ಹಿರಿಮೆಯನ್ನು ತಿಳಿಸುತ್ತಾ ಖ್ಯಾತ ಉದ್ಯಮಿ ಮುರುಡೇಶ್ವರದ ಶ್ರೀ ಸುನಿಲ್ ಶೆಟ್ಟಿಯವರು ಈ ದೇವಾಲಯವನ್ನು ಪುನರ್ ನಿರ್ಮಾಣ ಮಾಡಿದ್ದು ಇದೇ ಬರುವ ಏಪ್ರಿಲ್ 12ರಂದು ಅಷ್ಟಬಂಧ, ಬ್ರಹ್ಮಕಲಶೋತ್ಸವ ಹಾಗೂ 18ರಂದು ಜಾತ್ರಾ ಮಹೋತ್ಸವ ಜರುಗಲಿದ್ದು ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದೆ ಎಂದರು.

ಆಡಳಿತ ಮಂಡಳಿಯ ಅಧ್ಯಕ್ಷ ಡಾ ನರಸಿಂಹ ಪಂಡಿತ ನಿಲೇಕೇರಿ, ಉಪಾಧ್ಯಕ್ಷರಾದ ಎಂ ವಿ ಹೆಗಡೆ ಕೆರೆಮನೆ,ಶಿವಾನಂದ ಗೌಡ ಅಡಿಮನೆ, ಕೋಶಾಧಿಕಾರಿ ಗೋವಿಂದ ಗೌಡ, ಧರ್ಮ ನಾಯ್ಕ, ನಾಗರಾಜ ಭಂಡಾರಿ ಮೊದಲಾದವರು ಉಪಸ್ಥಿತರಿದ್ದು ದೇವರ ಸುಗಮ ದರ್ಶನಕ್ಕೆ ಅನುವು ಮಾಡಿಕೊಟ್ಟರು.

More Stories
ನೀಲಗೋಡ ಯಕ್ಷಚೌಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಅಮವಾಸ್ಯೆ ವಿಶೇಷ ಪೂಜೆ: ಭಕ್ತರ ಕಷ್ಟ ಕಾರ್ಪಣ್ಯ ನೀಗಿಸುವ ಶಕ್ತಿ ಕ್ಷೇತ್ರ
ಹೊನ್ನಾವರ ತಾಲೂಕಾ ಒಕ್ಕಲಿಗರ ಸಂಘಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಕೃಷ್ಣ ಜಟ್ಟಿ ಗೌಡ ಅವಿರೋಧ ಆಯ್ಕೆ
ಶಿಕ್ಷಣದೊಂದಿಗೆ ಬದುಕಿನ ಕೌಶಲ್ಯ ಹಾಗೂ ವ್ಯವಹಾರವನ್ನು ಕಲಿಯುವುದು ಮುಖ್ಯ: ರೋ. ಡಾ. ಅನಂತಮೂರ್ತಿ ಶಾಸ್ತ್ರಿ