ಕುಮಟಾ: ವಿಶೇಷ ಚೇತನ ಮಕ್ಕಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಸೆಕೆಂಡರಿ ಹೈ ಸ್ಕೂಲ್, ಹಿರೇಗುತ್ತಿ ವಿದ್ಯಾರ್ಥಿನಿ ನಂದಿನಿ ಬಿ. ಗೌಡ ಗುಂಡುಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿ ತಾಲೂಕು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಈ ಮಹತ್ವದ ಸಾಧನೆಗೆ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕುಮಟಾ ಹಾಗೂ ಅವರ ಕಾರ್ಯಾಲಯದ ಎಲ್ಲಾ ಸಿಬ್ಬಂದಿಗಳು ವಿದ್ಯಾರ್ಥಿನಿಯನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.
ಇದಲ್ಲದೆ ಹೈಸ್ಕೂಲ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಹೊನ್ನಪ್ಪ ಎನ್. ನಾಯಕ ಹಾಗೂ ಸರ್ವ ಸದಸ್ಯರು, ಹಿರೇಗುತ್ತಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಾಂತಾ ಎನ್. ನಾಯಕ, ಶಾಲೆಯ ಮುಖ್ಯಾಧ್ಯಾಪಕರಾದ ವಿಶ್ವನಾಥ ಬೇವಿನಕಟ್ಟಿ ಹಾಗೂ ಯುವಕ ಸಂಘದ ಅಧ್ಯಕ್ಷರಾದ ಆಕಾಶ ಬಿ. ನಾಯಕ ಅವರು ನಂದಿನಿ ಬಿ. ಗೌಡರ ಸಾಧನೆಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಉನ್ನತ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಕೆಗಳನ್ನು ವ್ಯಕ್ತಪಡಿಸಿದ್ದಾರೆ.

ನಂದಿನಿಯ ಈ ಸಾಧನೆ ವಿಶೇಷ ಚೇತನ ಮಕ್ಕಳಲ್ಲಿರುವ ಅಸೀಮ ಪ್ರತಿಭೆ ಹಾಗೂ ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ.
ವರಿದಿ ; ಎನ್, ರಾಮು ಹಿರೆಗುತ್ತಿ

More Stories
ಹಿರೇಗುತ್ತಿ ಹೈಸ್ಕೂಲಿನಲ್ಲಿ ಮಕ್ಕಳ ರಕ್ಷಣಾ ಕಾಯ್ದೆಗಳ ಅರಿವು ಜಾಗೃತಿ ಕಾರ್ಯಕ್ರಮ
ಹಿರೇಗುತ್ತಿ ಹೈಸ್ಕೂಲಿನಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ‘ವ್ಯಸನ ಮುಕ್ತ ದಿನಾಚರಣೆ’
ಮಿರ್ಜಾನ್ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಭಕ್ತಿ-ಶ್ರದ್ಧೆಯಿಂದ ನಡೆದ ‘ಗುರು ಪೂರ್ಣಿಮೆ’ ಆಚರಣೆ