March 2, 2026

ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ಹೊನ್ನಾವರ : ತಾಲೂಕಿನ ಹಳದಿಪುರದಲ್ಲಿ ರವಿವಾರ ಮುಂಜಾನೆ ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಳದಿಪುರದ ವಿನಾಯಕ ರಘುವಿರ ಶ್ಯಾನಭಾಗ (50) ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರಗಾಯಗೊAಡಿದ್ದ ವಿನಾಯಕ ಶ್ಯಾನಭಾಗ ಇವರಿಗೆ ಹೊನ್ನಾವರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವೈದ್ಯರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಲಕಾರಿ ಆಗದೆ ಮೃತ ಪಟ್ಟಿರುತ್ತಾರೆ. ಅಡಿಕೆ ವ್ಯಾಪಾರಸ್ಥರಾಗಿದ್ದ ಮೃತರು ಪತ್ನಿ, ಮಗ ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ನಿಧನಕ್ಕೆ ಹಳದಿಪುರ ಭಾಗದ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author

error: Content is protected !!