ಭಟ್ಕಳ: ತಾಲೂಕಿನ ಕೋಕ್ತಿನಗರದ ಬಂದರ್ ರೋಡ್ 2ನೇ ಕ್ರಾಸ್ನಲ್ಲಿ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರನ್ನು ಈಶ್ವರ ತಂದೆ ದೇವೇಂದ್ರ ನಾಯ್ಕ (37) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈಶ್ವರ ಅವರು ತಮ್ಮ ಮನೆಯ ಬೆಡ್ ರೂಮ್ನಲ್ಲಿ ಸೀಲಿಂಗ್ ಫ್ಯಾನಿಗೆ ಚೂಡಿದಾರದ ವೇಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಮೃತನ ತಂದೆ ದೇವೇಂದ್ರ ನಾಯ್ಕ ಅವರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

More Stories
ಭಟ್ಕಳದಲ್ಲಿ ಶಾಲಾ ಮಕ್ಕಳನ್ನ ಸಾಗಿಸುತ್ತಿದ್ದ ವಾಹನ ಪಲ್ಟಿ: 13 ವಿದ್ಯಾರ್ಥಿಗಳಿಗೆ ಸಣ್ಣ ಗಾಯ
ಭಟ್ಕಳದಲ್ಲಿ ಸಂಭ್ರಮದ ಹೋಳಿ ಹಬ್ಬ
ಬ್ಯಾಂಕ್ ದಾಖಲೆ ಪಡೆದು ವಂಚನೆ: ಠಾಣೆಯಲ್ಲಿ ಪ್ರಕರಣ