March 12, 2026

ನಗರ ಹಿಂದೂ ಸಂಗಮ ಯಶಸ್ಸಿಗೆಸಹಕರಿಸಿದ ಪೊಲೀಸರಿಗೆ ಧನ್ಯವಾದ

ಭಟ್ಕಳ: ಹಿಂದೂ ಸಮ್ಮೇಳನ ಸಮಿತಿ ಭಟ್ಕಳ ನಗರ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ನಗರ ಹಿಂದೂ ಸಂಗಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಪೊಲೀಸ್ ಇಲಾಖೆಗೆ ಸಮಿತಿ ವತಿಯಿಂದ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದ ಸಂದರ್ಭ ಶಾಂತಿ ಹಾಗೂ ಭದ್ರತೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ ಸಹಕಾರ ನೀಡಿದ ಹಿನ್ನೆಲೆ, ಸಮಿತಿಯ ಪದಾಧಿಕಾರಿಗಳು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದರು. ಅವರ ಸಹಕಾರದಿಂದ ಕಾರ್ಯಕ್ರಮ ಯಾವುದೇ ಅಡಚಣೆಗಳಿಲ್ಲದೆ ಯಶಸ್ವಿಯಾಗಿ ನಡೆಯಲು ಸಾಧ್ಯವಾಯಿತು ಎಂದು ಸಮಿತಿ ತಿಳಿಸಿದೆ.

About The Author

error: Content is protected !!