ಭಟ್ಕಳ: ಜಾನುವಾರುಗಳನ್ನು ಹತ್ಯೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಜಾಫರ್ (41), ನಾಥಗೇರಿ (ತಾ. ಹೊನ್ನಾವರ) ಮೂಲದವನಾಗಿದ್ದು, ಪ್ರಸ್ತುತ ಭಟ್ಕಳದ ಮೂಸಾನಗರ 4ನೇ ಕ್ರಾಸ್ನಲ್ಲಿ ವಾಸವಾಗಿದ್ದಾನೆ.
ಆರೋಪಿತನು ಇತರರೊಂದಿಗೆ ಸೇರಿಕೊಂಡು ಸುಮಾರು ₹2.80 ಲಕ್ಷ ಮೌಲ್ಯದ 3 ಎತ್ತುಗಳು ಹಾಗೂ ₹40 ಸಾವಿರ ಮೌಲ್ಯದ 2 ಗಂಡು ಕರುಗಳನ್ನು ಬಂದರ್ ರೋಡ್ 6ನೇ ಕ್ರಾಸ್ನಲ್ಲಿರುವ ಶೆಡ್ನಲ್ಲಿ ಯಾರಿಗೂ ತಿಳಿಯದಂತೆ ಇಟ್ಟು, ನೀರು-ಮೇವು ನೀಡದೇ ಹಿಂಸಾತ್ಮಕವಾಗಿ ಕಟ್ಟಿ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 3 ಎತ್ತುಗಳು ಹಾಗೂ 2 ಕರುಗಳನ್ನು ಹಗ್ಗ ಸಮೇತ ವಶಕ್ಕೆ ಪಡೆದಿದ್ದಾರೆ.
ಈ ಕುರಿತು ನಗರ ಠಾಣೆಯ ಪಿಎಸೈ ನವೀನ ನಾಯ್ಕ ದೂರು ನೀಡಿದ್ದು, ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣಾ ಕಾಯ್ದೆಯಡಿ ಪಿಎಸೈ ಸೋಮನಾಥ ರಾಠೋಡ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ