ಗಂಭೀರ ಅಪರಾಧ ಭೇದನೆಯಲ್ಲಿ ಚುರುಕುತನಕ್ಕೆ ಗೌರವ
ಭಟ್ಕಳ: ನಗರ ಠಾಣೆಯ ಪಿ.ಎಸ್.ಐ. ನವೀನ್ ಎಸ್. ನಾಯ್ಕ ಅವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಬಂಗಾರದ ಪದಕಕ್ಕೆ ಆಯ್ಕೆ ಮಾಡಲಾಗಿದೆ.
ಮಾದಕದ್ರವ್ಯ ಪ್ರಕರಣಗಳನ್ನು ಒಳಗೊಂಡಂತೆ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಸೇವಾ ದಕ್ಷತೆ ತೋರಿದ ಹಿನ್ನೆಲೆಯಲ್ಲಿ ಈ ಗೌರವ ಅವರಿಗೆ ಲಭಿಸಿದೆ. ಮುಖ್ಯಮಂತ್ರಿ ಪದಕ ನಿಯಮಾವಳಿಗಳ ಪ್ರಕಾರ ಪದಕ ಪ್ರದಾನಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಪಿಎಸ್ಐ ನವೀನ ನಾಯ್ಕ ಅವರು ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಭಟ್ಕಳ ನಗರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ಈ ಹಿಂದೆ ಜಿಲ್ಲೆಯ ಕುಮಟಾ, ಗೋಕರ್ಣ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅವರ ಮುತುವರ್ಜಿ ಹಾಗೂ ಸುದೀರ್ಘ ಕಾಲದ ಈ ಸೇವೆಯನ್ನು ಗುರುತಿಸಿ ಸರ್ಕಾರ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಅಪರಾಧ ಪತ್ತೆಯಲ್ಲಿ ತೋರಿದ ತ್ವರಿತ ಕ್ರಮಗಳು ಹಾಗೂ ವೃತ್ತಿಪರ ನೈಪುಣ್ಯವನ್ನು ಪರಿಗಣಿಸಿ ನವೀನ್ ಎಸ್. ನಾಯ್ಕ ಅವರನ್ನು ಈ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಅವರ ಚುರುಕುತನ ಮತ್ತು ಪರಿಣಾಮಕಾರಿ ಕಾರ್ಯವೈಖರಿ ಪೊಲೀಸ್ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

More Stories
ಭಟ್ಕಳದಲ್ಲಿ ಮನೆ ಕಳ್ಳತನ: 5.5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿಕೆ
ಮುರ್ಡೇಶ್ವರದಲ್ಲಿ ಭೀಕರ ರಸ್ತೆ ಅಪಘಾತ: ಮಾಜಿ ಸೈನಿಕ ಸಾವು, ಮೂವರಿಗೆ ಗಾಯ
ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡಕ್ಕೆ ಮೇ 14ರಂದು ಶಿಲಾನ್ಯಾಸ