

ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣ ಸಮೀಪದ ಜೇನು ಸೊಸೈಟಿ ಬಿಲ್ಡಿಂಗನಲ್ಲಿರುವ ಯು.ಕೆ.ಸೌಹಾರ್ದ ಸೊಸೈಟಿ ಲಿಮಿಟೆಡ್ ಯಲ್ಲಾಪುರ ಇದರ ಹೊನ್ನಾವರ ಶಾಖೆಯಲ್ಲಿ ರವಿವಾರ ಮಧ್ಯಾಹ್ನ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ಹಾನಿ ಸಂಭವಿಸಿದೆ.

ಬ್ಯಾಂಕನಲ್ಲಿ ಅಳವಡಿಸಿದ ಸಿಸಿ ಕ್ಯಾಮರಾ ವೈಯರನಲ್ಲಿ ಬೆಂಕಿ ಕಂಡಾಗ ದಟ್ಟದಾದ ಹೊಗೆ ಆವರಿಸಿದೆ. ಸ್ಥಳಿಯರು ಬೆಂಕಿಯನ್ನು ಗಮನಿಸಿ ಪೊಲೀಸರು ಹಾಗೂ ಅಗ್ನಿಶಾಮಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸುವ ಮೂಲಕ ಬೆಂಕಿ ಕೆನ್ನಾಲಿಗೆ ಉಳಿದ ಅಂಗಡಿಗಳಿಗೆ ವ್ಯಾಪಿಸಿದಂತೆ ನೋಡಿಕೊಂಡರು. ಬ್ಯಾಂಕ್ ಒಳಗಿನ ಕಾಗದಪತ್ರಗಳು ಪೀಠೋಪಕರಣಗಳಿಗೆ ಹಾನಿ ಉಂಟಾಗಿರುದಾಗಿ ತಿಳಿದುಬಂದಿದೆ. ರವಿವಾರ ರಜೆ ಇದ್ದ ಕಾರಣ ಸಾರ್ವಜನಿಕರು ಆಗಮಿಸದೇ ಇರುವುದರಿಂದ ದೊಡ್ಡ ಅನಾಹುತ ತಪ್ಪಿದೆ.

About The Author




More Stories
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಪ್ರಥಮ, ರಾಜ್ಯ ಮಟ್ಟಕ್ಕೆ ಆಯ್ಕೆ!
ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಧಕರ ಸ್ವಗೃಹದಲ್ಲೇ ಸನ್ಮಾನಿಸಿ ಗೌರವಿಸಿದ ಅರಸು ವಿಚಾರ ವೇದಿಕೆ.
ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಹೊನ್ನಾವರದಲ್ಲಿ ಮಾಜಿ ಸಿಎಂ ಜನ್ಮದಿನಾಚರಣೆ.