ಭಟ್ಕಳ: ಹೈದರಾಬಾದ್ ಮೂಲದ ವಂದನ ಎಂಬ ಮಹಿಳೆ ರಚಿಸಿರುವ ಮಹಾ ಮುರುಡೇಶ್ವರ ಹಾಗೂ ರಾಜಗೋಪುರದ ಅದ್ಭುತ ಚಿತ್ರಕಲೆ ಭಕ್ತರ ಮನಸೂರೆಗೊಂಡಿದೆ.
ಮಹಾ ಮುರುಡೇಶ್ವರ ಶಿವನ ಭವ್ಯ ಪ್ರತಿಮೆ ಹಾಗೂ ದೇವಸ್ಥಾನದ ರಾಜಗೋಪುರವನ್ನು ಸ್ಥಳದಲ್ಲಿಯೆ ಒಂದೇ ಚಿತ್ರಪಟದಲ್ಲಿ ಆಕರ್ಷಕವಾಗಿ ಮೂಡಿಸಿರುವುದು ಈ ಕೃತಿಯ ವಿಶೇಷತೆ. ಚಿತ್ರದಲ್ಲಿ ಮುರುಡೇಶ್ವರ ದೇವಾಲಯದ ಮಹಾದೇವನ ಮೂರ್ತಿಯನ್ನು ಅತ್ಯಂತ ಸೂಕ್ಷ್ಮವಾಗಿ ಚಿತ್ರಿಸಿರುವುದು ಗಮನ ಸೆಳೆಯುತ್ತದೆ.
ಇನ್ನೊಂದೆಡೆ, ರಾಜಗೋಪುರದ ಕಲಾತ್ಮಕ ವಿನ್ಯಾಸವನ್ನೂ ಸೂಕ್ಷ್ಮ ರೇಖಾಚಿತ್ರಗಳ ಮೂಲಕ ಮನೋಜ್ಞವಾಗಿ ಮೂಡಿಸಲಾಗಿದೆ. ವಂದನ ಅವರ ಈ ಚಿತ್ರಕಲೆ ಭಕ್ತರಲ್ಲಿ ಭಕ್ತಿ ಭಾವನೆ ಹೆಚ್ಚಿಸುವುದರ ಜೊತೆಗೆ, ಕಲಾ ಪ್ರೇಮಿಗಳಿಂದಲೂ ಪ್ರಶಂಸೆಗೆ ಪಾತ್ರವಾಗಿದೆ.

More Stories
ಮುರ್ಡೇಶ್ವರ ಠಾಣಾ ವ್ಯಾಪ್ತಿಯ ಇಬ್ಬರು ರೌಡಿಶೀಟರ್ಗಳಿಗೆ 6 ತಿಂಗಳ ಗಡಿಪಾರು
ಬಕ್ರೀದ್ ಹಿನ್ನೆಲೆ ಭಟ್ಕಳದಲ್ಲಿ ಕಟ್ಟೆಚ್ಚರ: ಮೇ 30ರವರೆಗೆ ಅಧಿಕಾರಿಗಳಿಗೆ ಕೇಂದ್ರ ಸ್ಥಾನದಲ್ಲೇ ಇರಲು ಸೂಚನೆ
ಮನೆ ಕಳ್ಳತನ ಪ್ರಕರಣ: 8 ಗಂಟೆಯೊಳಗೆ ಆರೋಪಿಗಳ ಬಂಧನ