ಭಟ್ಕಳ: ಮೀನುಗಾರಿಕೆಗೆ ತೆರಳಿದ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಅಳೇಕೋಡಿ ಬಂದರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಒಡಿಶಾ ರಾಜ್ಯದ ಸುಂದರಗಢ ಜಿಲ್ಲೆಯ 27 ವರ್ಷದ ಜೈರಾಮ್ ಬಿರಗಂಟಿ ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಜನಾಬಾಯಿ ಅವರಿಗೆ ಸೇರಿದ ‘ಶ್ರೀ ಮುಖಾಂಬಿಕಾ’ ಬೋಟ್ ಹತ್ತುವ ವೇಳೆ ಕಾಲು ಜಾರಿ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಸ್ಥಳೀಯರು ತಕ್ಷಣ ಶೋಧ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿಲ್ಲ. ಈ ಸಂಬಂಧ ದುಲವ ತಂದೆ ಗೋವರ್ಧನ ಆಡಾ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

More Stories
ಭಟ್ಕಳದಲ್ಲಿ ಮನೆ ಕಳ್ಳತನ: 5.5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿಕೆ
ಮುರ್ಡೇಶ್ವರದಲ್ಲಿ ಭೀಕರ ರಸ್ತೆ ಅಪಘಾತ: ಮಾಜಿ ಸೈನಿಕ ಸಾವು, ಮೂವರಿಗೆ ಗಾಯ
ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡಕ್ಕೆ ಮೇ 14ರಂದು ಶಿಲಾನ್ಯಾಸ