ಶಿರಸಿ: ತಾಲೂಕಿನ ಸೋಂದಾ ಮೂಲದ ಅರ್ಚನಾ ಹೆಗಡೆ ಅವರು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಭಾಷಾ ಮತ್ತು ಸಾಹಿತ್ಯ ವಿಭಾಗದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ವಿಶ್ವವಿದ್ಯಾಲಯದ 12ನೇ ಮತ್ತು 13ನೇ ದೀಕ್ಷಾಂತ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರಿಂದ ಈ ಪದವಿ ಪ್ರದಾನ ಮಾಡಲಾಯಿತು.
ಡಾ. ಅರ್ಚನಾ ಹೆಗಡೆ ಅವರು “ಸಂಸ್ಕೃತ ಸಾಹಿತ್ಯಕ್ಕೆ ಕಾಶ್ಮೀರ ಕವಿಗಳ ಕೊಡುಗೆ ಮತ್ತು ಐತಿಹಾಸಿಕ ಅಧ್ಯಯನ” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಬಂಧ ಮಂಡಿಸಿ ಈ ಗೌರವಕ್ಕೆ ಪಾತ್ರರಾದರು. ಈ ಸಂಶೋಧನೆಯನ್ನು ವಿದ್ವಾನ್ ಗಂಗಾಧರ ಭಟ್ ಮತ್ತು ಡಾ. ಕೃಷ್ಣ ಜೋಶಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ.
ಸೋಂದಾ ಗ್ರಾಮದ ಕಲಗದ್ದೆಯ ಗಂಗಾ ಮತ್ತು ಗಜಾನನ ಹೆಗಡೆ ದಂಪತಿಯ ಪುತ್ರಿಯಾಗಿರುವ ಅರ್ಚನಾ ಹೆಗಡೆ, ಪ್ರಸ್ತುತ ಬೆಂಗಳೂರಿನ ದೀಕ್ಷಾ ಕಾಲೇಜು, ಜೈನ್ ಕಾಲೇಜು ಹಾಗೂ ಎನ್.ಎಂ.ಕೆ.ಆರ್.ವಿ. ಬಿ.ಎಡ್ ಕಾಲೇಜುಗಳಲ್ಲಿ ಅರೆಕಾಲಿಕ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಭರತನಾಟ್ಯ ಕಲೆಯಲ್ಲಿಯೂ ಆಸಕ್ತಿ ಹೊಂದಿರುವ ಅವರು, ಬೆಂಗಳೂರಿನ ಶಶಿಧರ್ ಸಿ.ವಿ. ಅವರ ಪತ್ನಿಯಾಗಿದ್ದು, ಇಬ್ಬರು ಮಕ್ಕಳ ತಾಯಿಯಾಗಿದ್ದರೂ ವಿದ್ಯಾಭ್ಯಾಸವನ್ನು ಮುಂದುವರಿಸಿ ಈ ಸಾಧನೆ ಸಾಧಿಸಿದ್ದಾರೆ.

More Stories
ಅರಣ್ಯ ಇಲಾಖೆ ಕಾರ್ಯ ವೈಖರ್ಯಕ್ಕೆ ತೀವ್ರ ಅಸಮಧಾನ : ನಡುತೋಪು ಲೆಕ್ಕಕ್ಕೆ ಕೋಟಿಗಳಷ್ಟು ಹಣ ಖರ್ಚು: ಕೋಟಿ ಹೊಂಡ ಎಲ್ಲಿ, ನೆಟ್ಟಿದ್ದು ಎಷ್ಟು, ಬದುಕಿದ್ದು ಎಷ್ಟು- ಅರಣ್ಯವಾಸಿಗಳ ಪ್ರಶ್ನೆ
ಪೌಷ್ಟಿಕ ಆಹಾರದ ಸೇವನೆಯಿಂದ ಕ್ಷಯ ರೋಗಿಗಳ ರೋಗನಿರೋಧಕ ಶಕ್ತಿ ಹೆಚ್ಚಳ – ಉದಯಶಂಕರ
ಕ್ಷಯರೋಗದ ಬಗ್ಗೆ ಜಾಗೃತಿ ಅಗತ್ಯ – ಡಾ.ಇಲಿಯಾಸ್ ಹವಾಲ್ದಾರ್.