ಭಟ್ಕಳ: ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಭಟ್ಕಳ ನಗರದ ಶಂಸುದ್ದೀನ್ ಸರ್ಕಲ್ ಬಳಿ ಅಶೋಕ್ ಮಂಜುನಾಥ ನಾಯ್ಕ (34) ಹಾಗೂ ಮುರುಡೇಶ್ವರ ಮುಖ್ಯರಸ್ತೆಯ ದೀಪಕ್ ಮಂಜುನಾಥ ನಾಯ್ಕ (30) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಸಾರ್ವಜನಿಕರಿಂದ ಹಣ ಪಡೆದು ಜೂಜಾಟ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಭಟ್ಕಳ ನಗರ ಹಾಗೂ ಮುರುಡೇಶ್ವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

More Stories
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶ್ರೀ ಅರುಣಾನಂದ ಸ್ವಾಮೀಜಿ ಸಾಂತ್ವನ
ಕಪ್ಪೆಚಿಪ್ಪು ದುರಂತದ ಮೃತರ ಮನೆಗಳಿಗೆ ಪ್ರಮೋದ್ ಮಧ್ವರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ
ಮೃತರ ಕುಟುಂಬಗಳಿಗೆ ಕಾಗೇರಿ ಸಾಂತ್ವನ