ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾ.ಪಂ. ವ್ಯಾಪ್ತಿಯ ಅರೇಅಂಗಡಿ ಸಮೀಪದ ಗೇರು ಪ್ಯಾಂಟಿಶನ್ ಪ್ರದೇಶದಲ್ಲಿ ಚಿರತೆಯೊಂದು ಉರುಳಿಗೆ ಸಿಲುಕಿ ಒದ್ದಾಡುತ್ತಿರುವ ಘಟನೆ ರವಿವಾರ ಮುಂಜಾನೆ ಬೆಳಕಿಗೆ ಬಂದಿದೆ.
ಕಾಡುಪ್ರಾಣಿಗಳಿಂದ ರಕ್ಷಣೆಗಾಗಿ ಅಳವಡಿಸಿದ ಉರುಳಿಗೆ ಸಿಲುಕಿದ ಕಪ್ಪು ಬಣ್ಣದ ಚಿರತೆಯು ತೀವ್ರ ಚಿರಾಟ ನಡೆಸುತ್ತಿತ್ತು. ಚಿರಾಟದ ಶಬ್ದ ಕೇಳಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಚಿರತೆಯನ್ನು ನೋಡಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ, ಪ್ರಾಣಿಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಜನರನ್ನು ದೂರವಿಡುವ ಕ್ರಮ ಕೈಗೊಂಡಿದ್ದಾರೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಚಿರತೆಯ ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಅದನ್ನು ಸುರಕ್ಷಿತವಾಗಿ ಕಾಡಿಗೆ ಬಿಡುವ ನಿರೀಕ್ಷೆಯಿದೆ.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಕೌಶಲ್ಯಾಭಿವೃದ್ಧಿಯಿಂದ ಉದ್ಯೋಗ ಗಳಿಕೆ ಸಾಧ್ಯ– ವಿನಾಯಕ ನೀಲ್ಕೋಡ್
ಶ್ರೀನಿಧಿ ಸೇವಾ ವಾಹಿನಿ ತಾಲೂಕ ಗಾಣಿಗ ಸಂಘ 25 ರ ಸಂಭ್ರಮ; ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ
ಅಪ್ಸರಕೊಂಡದ ಕಡಲತೀರದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಓರ್ವ ಮೃತ ಪಟ್ಟು ಇರ್ವರಿಗೆ ಗಾಯ ಸಂಭವಿಸಿದ ಘಟನೆ ನಡೆದಿದೆ.