ಕಾರ್ಕಳ: ಅಜೆಕಾರು ಶ್ರೀ ಮಹಾವಿಷ್ಣು ದೇವರ ವಾರ್ಷಿಕ ರಥೋತ್ಸವವು ಏ. 18 ರಂದು ಜರುಗಿತು.
ವೇದಮೂರ್ತಿ ಉಡುಪಿ ವಾದಿರಾಜ ತಂತ್ರಿಯವರ ನೇತೃತ್ವದಲ್ಲಿ ದೇವರ ಉತ್ಸವ ಬಲಿ, ರಂಗಪೂಜೆ, ಪಲ್ಲಪೂಜೆ ಮುಂತಾದ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಷ್ಣುಮೂರ್ತಿ ದೇವರ ಉತ್ಸವ ಮೂರ್ತಿಯ ರಥಾರೋಹಣ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾನ ಸಮಿತಿಯ ಅಧ್ಯಕ್ಷ ಭರತ್ ಶೆಟ್ಟಿ ಅಜೆಕಾರು, ದೇವಸ್ಯ ಶಿವರಾಮ ಶೆಟ್ಟಿ, ವಿಜಯ ಶೆಟ್ಟಿ,ಭಾಸ್ಕರ ಶೆಟ್ಟಿ ,ಕುಂಠಿನಿ, ಸುಜಯ ಶೆಟ್ಟಿ, ಸಮಿತಿ ಸದಸ್ಯರಾದ ಮಜಲುಮನೆ ಪ್ರಕಾಶ್ ಶೆಟ್ಟಿ, ಯಶೋಧಾ ಶೆಟ್ಟಿ, ಪ್ರೀತೇಶ್ ಶೆಟ್ಟಿ,ಸತೀಶ್ ನಾಯಕ್, ಅರ್ಚಕರಾದ ರಂಗನಾಥ ಭಟ್, ಕೃಷ್ಣಮೂರ್ತಿ ಭಟ್ ಸೇರಿದಂತೆ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ಸಂಜೆ ರಥೋತ್ಸವ ,ಕೆರೆ ದೀಪ, ಉತ್ಸವ ಬಲಿ ಹಾಗೂ ಧರ್ಮದೈವಗಳ ನೇಮೋತ್ಸವ,ಅವಭೃತ ಸ್ನಾನ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳು ನಡೆದವು. ವರದಿ : ಅರುಣ ಭಟ್ ಕಾರ್ಕಳ


More Stories
ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್ನ 20 ಕಿ.ಮೀ. ಬೃಹತ್ ಜಾಥಾ! ಬಿಜೆಪಿ ವಿರುದ್ಧ ಆಕ್ರೋಶ
ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದಲ್ಲಿ ವೈಭವದ ಜಾತ್ರಾ ಮಹೋತ್ಸವ – ವ್ಯಾಘ್ರ ಚಾಮುಂಡಿ ದೈವದ ಭಂಡಾರ ಮೆರವಣಿಗೆ
ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಜಾತ್ರಾ ಮಹೋತ್ಸವ