ಭಟ್ಕಳ: ಅಕ್ರಮವಾಗಿ ಒಂಟೆಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳನ್ನು ಕರಣ ಬಾಬರ (26, ಮಧ್ಯಪ್ರದೇಶ), ಸುಹಾಸ ಸೂರ್ಯವಂಶಿ (22, ಶಿರೋಡ್ – ಕೊಲ್ಲಾಪುರ) ಹಾಗೂ ಯಶ ಗೋಟಕಿಂಡೆ (19, ಶಿರೋಡ್ – ಕೊಲ್ಲಾಪುರ) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಶಿರಾಲಿ ಕಡೆಯಿಂದ ಉಳ್ಳಾಲ ಕಡೆಗೆ ಲಾರಿ ಮೂಲಕ ಸುಮಾರು ₹3.75 ಲಕ್ಷ ಮೌಲ್ಯದ 8 ಒಂಟೆಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ಮಾಡಲಾಗುತ್ತಿತ್ತು. ಆರೋಪಿಗಳು ಒಂಟೆಗಳಿಗೆ ನೀರು ಹಾಗೂ ಮೇವು ನೀಡದೇ, ಜಾನುವಾರು ಸಾಗಾಟಕ್ಕೆ ಅಗತ್ಯವಾದ ಸಕ್ಷಮ ಪ್ರಾಧಿಕಾರದ ಪರವಾನಿಗೆಯಿಲ್ಲದೇ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಸಹಿತ ಒಂಟೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ದೂರು ದಾಖಲಾಗಿದೆ,ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

More Stories
ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಭಟ್ಕಳದಲ್ಲಿ ಮೆಡಿಕಲ್ ಶಾಪ್ ಬಂದ್
ವೆಂಕ್ಚಾಪುರ ಸೇತುವೆ ಬಳಿ ಕಾರುಗಳ ಭೀಕರ ಡಿಕ್ಕಿ ನಾಲ್ವರಿಗೆ ಗಾಯ;
ಚತುಷ್ಪಥ ಕಾಮಗಾರಿ ಅವಾಂತರ: ಭಟ್ಕಳದಲ್ಲಿ ಸಂಚಾರ ದಟ್ಟಣೆ, ಜಲಾವೃತ ಭೀತಿ