ಭಟ್ಕಳ: ಅಕ್ರಮವಾಗಿ ಒಂಟೆಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳನ್ನು ಕರಣ ಬಾಬರ (26, ಮಧ್ಯಪ್ರದೇಶ), ಸುಹಾಸ ಸೂರ್ಯವಂಶಿ (22, ಶಿರೋಡ್ – ಕೊಲ್ಲಾಪುರ) ಹಾಗೂ ಯಶ ಗೋಟಕಿಂಡೆ (19, ಶಿರೋಡ್ – ಕೊಲ್ಲಾಪುರ) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಶಿರಾಲಿ ಕಡೆಯಿಂದ ಉಳ್ಳಾಲ ಕಡೆಗೆ ಲಾರಿ ಮೂಲಕ ಸುಮಾರು ₹3.75 ಲಕ್ಷ ಮೌಲ್ಯದ 8 ಒಂಟೆಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ಮಾಡಲಾಗುತ್ತಿತ್ತು. ಆರೋಪಿಗಳು ಒಂಟೆಗಳಿಗೆ ನೀರು ಹಾಗೂ ಮೇವು ನೀಡದೇ, ಜಾನುವಾರು ಸಾಗಾಟಕ್ಕೆ ಅಗತ್ಯವಾದ ಸಕ್ಷಮ ಪ್ರಾಧಿಕಾರದ ಪರವಾನಿಗೆಯಿಲ್ಲದೇ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಸಹಿತ ಒಂಟೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ದೂರು ದಾಖಲಾಗಿದೆ,ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ