ಭಟ್ಕಳ: ಅಕ್ರಮವಾಗಿ ಒಂಟೆಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಗಳನ್ನು ಕರಣ ಬಾಬರ (26, ಮಧ್ಯಪ್ರದೇಶ), ಸುಹಾಸ ಸೂರ್ಯವಂಶಿ (22, ಶಿರೋಡ್ – ಕೊಲ್ಲಾಪುರ) ಹಾಗೂ ಯಶ ಗೋಟಕಿಂಡೆ (19, ಶಿರೋಡ್ – ಕೊಲ್ಲಾಪುರ) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಶಿರಾಲಿ ಕಡೆಯಿಂದ ಉಳ್ಳಾಲ ಕಡೆಗೆ ಲಾರಿ ಮೂಲಕ ಸುಮಾರು ₹3.75 ಲಕ್ಷ ಮೌಲ್ಯದ 8 ಒಂಟೆಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ಮಾಡಲಾಗುತ್ತಿತ್ತು. ಆರೋಪಿಗಳು ಒಂಟೆಗಳಿಗೆ ನೀರು ಹಾಗೂ ಮೇವು ನೀಡದೇ, ಜಾನುವಾರು ಸಾಗಾಟಕ್ಕೆ ಅಗತ್ಯವಾದ ಸಕ್ಷಮ ಪ್ರಾಧಿಕಾರದ ಪರವಾನಿಗೆಯಿಲ್ಲದೇ ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ವೇಳೆ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಸಹಿತ ಒಂಟೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ದೂರು ದಾಖಲಾಗಿದೆ,ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

More Stories
ಭಟ್ಕಳದಲ್ಲಿ ಪ್ರೋ ಕಬಡ್ಡಿ ಮಾದರಿಯ ಜಿಲ್ಲಾ ಮಟ್ಟದ ಫೆಡರೇಶನ್ ಕಪ್: ಮೇ ೯–೧೦ರಂದು ಪಂದ್ಯಾಟ
ಸಿದ್ದಾರ್ಥ ಪಿ.ಯು ಕಾಲೇಜು ಹೊಸ ಕಟ್ಟಡ ಉದ್ಘಾಟನೆ ಏಪ್ರಿಲ್ ೨೬ರಂದು
ಭಟ್ಕಳದಲ್ಲಿ ಎರಡು ರಾಯಲ್ ಎನ್ಫೀಲ್ಡ್ ಬೈಕ್ಗಳ ಡಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ