ಭಟ್ಕಳ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಿ ವಧೆ ಮಾಡಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಭೇದಿಸಿ, ಎರಡು ಎತ್ತುಗಳನ್ನು ರಕ್ಷಿಸಿ ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ.
ಬಂದರ್ ರೋಡ್ 3ನೇ ಕ್ರಾಸ್ ನಿವಾಸಿ ಮಹಮ್ಮದ್ ಶಿಯಾಮ್ (42) ಸೇರಿದಂತೆ ಇತರರು ಸೇರಿಕೊಂಡು ಸುಮಾರು ₹2 ಲಕ್ಷ ಮೌಲ್ಯದ ಎರಡು ಎತ್ತುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರೆಂದು ಆರೋಪಿಸಲಾಗಿದೆ.
ಆರೋಪಿಗಳು ಬಂದರ್ ರೋಡ್ 6ನೇ ಕ್ರಾಸ್ ಸಮೀಪದ ಖಾಲಿ ಜಾಗಕ್ಕೆ ವಾಹನದ ಮೂಲಕ ಎತ್ತುಗಳನ್ನು ತಂದು, ಅವುಗಳಿಗೆ ನೀರು ಹಾಗೂ ಮೇವು ನೀಡದೆ ಕಟ್ಟಿ ಹಾಕಿ, ವಧೆ ಮಾಡುವ ಉದ್ದೇಶದಿಂದ ಬೇರೆಡೆಗೆ ಸಾಗಿಸಲು ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಸ್ಥಳದಲ್ಲಿದ್ದ ಎರಡು ಎತ್ತುಗಳನ್ನು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಆರೋಪಿಯ ವಿರುದ್ಧ ಸರ್ಕಾರದ ಪರವಾಗಿ ಪಿಎಸ್ಐ ತಿಮ್ಮಪ್ಪ ಎಸ್ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಕರ್ನಾಟಕ ಗೋಹತ್ಯೆ ನಿರ್ಬಂಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

More Stories
ಭಟ್ಕಳದಲ್ಲಿ ಮನೆ ಕಳ್ಳತನ: 5.5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿಕೆ
ಮುರ್ಡೇಶ್ವರದಲ್ಲಿ ಭೀಕರ ರಸ್ತೆ ಅಪಘಾತ: ಮಾಜಿ ಸೈನಿಕ ಸಾವು, ಮೂವರಿಗೆ ಗಾಯ
ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಸ್ಥಾನದ ನೂತನ ಶಿಲಾಮಯ ಕಟ್ಟಡಕ್ಕೆ ಮೇ 14ರಂದು ಶಿಲಾನ್ಯಾಸ