ಭಟ್ಕಳ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ಪ್ರಕರಣದಲ್ಲಿ ವಾಹನದ ಮಾಲೀಕರಿಗೆ ನ್ಯಾಯಾಲಯ ದಂಡ ವಿಧಿಸಿದೆ.
ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದಲ್ಲಿ ಕೆಎ–47/ಆರ್–8460 ಸಂಖ್ಯೆಯ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕನಿಂದ ಚಾಲನೆ ಮಾಡಿಸಿದ ಆರೋಪದಡಿ ಬಸ್ತಿ ಕಾಯ್ಕಿಣಿ ನಿವಾಸಿ ರಾಜೇಶ್ ನಾಗಪ್ಪ ನಾಯ್ಕ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮುರುಡೇಶ್ವರ ಪಿ.ಎಸ್.ಐ ಹನುಮಂತ ಬಿರಾದಾರ ಅವರು ಮೋಟಾರ್ ವಾಹನ ಕಾಯ್ದೆಯ ಕಲಂ 5 ಹಾಗೂ 199(ಎ) ಅನ್ವಯ ದೋಷಾರೋಪಣಾ ಪತ್ರವನ್ನು ಮಾನ್ಯ ಭಟ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ಹಿನ್ನೆಲೆ ರಾಜೇಶ್ ನಾಗಪ್ಪ ನಾಯ್ಕ್ ಅವರಿಗೆ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಅಪ್ರಾಪ್ತರಿಗೆ ವಾಹನ ನೀಡುವುದು ಗಂಭೀರ ಅಪರಾಧವಾಗಿದ್ದು, ಇಂತಹ ಪ್ರಕರಣಗಳ ಮೇಲೆ ಮುಂದುವರೆದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

More Stories
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶ್ರೀವಲಿ ಪ್ರೌಢ ಶಾಲೆ ಚಿತ್ರಾಪುರ ಶೇಕಡಾ 100 ಫಲಿತಾಂಶ ಸಾಧನೆ
ಭಟ್ಕಳ: ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ದಶಮಾನೋತ್ಸವಕ್ಕೆ ಸಜ್ಜಾದ ಕಟ್ಟಡ ಕಾರ್ಮಿಕರ ಸಂಘ
ಮತ್ತೊಮ್ಮೆ ಶೇ. ನೂರರ ಸಾಧನೆ ಮಾಡಿದ ಜಾಲಿಯ ಸರ್ಕಾರಿ ಪ್ರೌಢಶಾಲೆ