

ಭಟ್ಕಳ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ಪ್ರಕರಣದಲ್ಲಿ ವಾಹನದ ಮಾಲೀಕರಿಗೆ ನ್ಯಾಯಾಲಯ ದಂಡ ವಿಧಿಸಿದೆ.

ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದಲ್ಲಿ ಕೆಎ–47/ಆರ್–8460 ಸಂಖ್ಯೆಯ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕನಿಂದ ಚಾಲನೆ ಮಾಡಿಸಿದ ಆರೋಪದಡಿ ಬಸ್ತಿ ಕಾಯ್ಕಿಣಿ ನಿವಾಸಿ ರಾಜೇಶ್ ನಾಗಪ್ಪ ನಾಯ್ಕ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮುರುಡೇಶ್ವರ ಪಿ.ಎಸ್.ಐ ಹನುಮಂತ ಬಿರಾದಾರ ಅವರು ಮೋಟಾರ್ ವಾಹನ ಕಾಯ್ದೆಯ ಕಲಂ 5 ಹಾಗೂ 199(ಎ) ಅನ್ವಯ ದೋಷಾರೋಪಣಾ ಪತ್ರವನ್ನು ಮಾನ್ಯ ಭಟ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ಹಿನ್ನೆಲೆ ರಾಜೇಶ್ ನಾಗಪ್ಪ ನಾಯ್ಕ್ ಅವರಿಗೆ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಅಪ್ರಾಪ್ತರಿಗೆ ವಾಹನ ನೀಡುವುದು ಗಂಭೀರ ಅಪರಾಧವಾಗಿದ್ದು, ಇಂತಹ ಪ್ರಕರಣಗಳ ಮೇಲೆ ಮುಂದುವರೆದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ