ಭಟ್ಕಳ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಶ್ಚಿಮ ಬಂಗಾಳ, ಆಸಾಂ ಹಾಗೂ ಪಾಂಡಿಚೇರಿಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಭಟ್ಕಳ ಮಂಡಳದ ವತಿಯಿಂದ ಪಟ್ಟಣದ ಮುಖ್ಯ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.
ಕಾರ್ಯಕರ್ತರು ಸಿಹಿ ಹಂಚಿಕೊಂಡು ಸಂಭ್ರಮಿಸಿದರು.


ಈ ಸಂದರ್ಭದಲ್ಲಿ ಮಂಡಳ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಪ್ರಮುಖರಾದ ರಾಜೇಶ್ ನಾಯ್ಕ, ಸುಬ್ರಾಯ ದೇವಡಿಗ, ಭಾಸ್ಕರ ದೇವಿಮನೆ, ಮೋಹನ ನಾಯ್ಕ, ಸುಬ್ರಾಯ ನಾಯ್ಕ, ವೆಂಕಟೇಶ ನಾಯ್ಕ, ಶ್ರೀಕಾಂತ ನಾಯ್ಕ, ಶ್ರೀನಿವಾಸ ನಾಯ್ಕ, ಕೇಶವ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

More Stories
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಭಟ್ಕಳದ ಯುವತಿ ದುರ್ಮರಣ
ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ
ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅಡಿಪಾಯ; ಶಾಸಕ ಮಂಕಾಳ ವೈದ್ಯ