ಭಟ್ಕಳ: ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಭಟ್ಕಳ ಉಪವಿಭಾಗಾಧಿಕಾರಿ ಹುದ್ದೆಗೆ ಸರ್ಕಾರ ನೇಮಕ ಮಾಡಿದ್ದು, ಜೆ. ಮಹೇಶ್ (ಕೆಎಎಸ್ ಕಿರಿಯ ಶ್ರೇಣಿ) ಅವರು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕಳೆದ ವರ್ಷ ಡಾ. ನಯನ್ ಎನ್ ವರ್ಗಾವಣೆಯಾದ ಬಳಿಕ ಎಸಿ ಹುದ್ದೆ ಖಾಲಿಯಾಗಿತ್ತು. ಬಳಿಕ ಶಿರಸಿ ಉಪವಿಭಾಗಾಧಿಕಾರಿಯಾಗಿದ್ದ ಕುಮಾರಿ ಕಾವ್ಯರಾಣಿ ಅವರಿಗೆ ಭಟ್ಕಳದ ಪ್ರಭಾರಿ ಜವಾಬ್ದಾರಿ ನೀಡಲಾಗಿತ್ತು. ಅವರ ಇತ್ತೀಚಿನ ವರ್ಗಾವಣೆಯಿಂದ ಹುದ್ದೆ ಮತ್ತೆ ತೆರವಾಗಿತ್ತು.
ಈ ನಡುವೆ ಹೊನ್ನಾವರ ತಹಶೀಲ್ದಾರ ಪ್ರವೀಣ್ ಕರಂಡೆ ಅವರಿಗೆ ಪ್ರಭಾರಿ ಎಸಿ ಚಾರ್ಜ್ ನೀಡಲಾಗಿತ್ತು. ರಾಜ್ಯ ಸರ್ಕಾರದ ವರ್ಗಾವಣೆ ಆದೇಶದಂತೆ ಭಟ್ಕಳಕ್ಕೆ ಆಗಮಿಸಿದ ಜೆ. ಮಹೇಶ್ ಅವರು ಕಚೇರಿಯಲ್ಲಿ ಕಡತಗಳಿಗೆ ಸಹಿ ಹಾಕುವ ಮೂಲಕ ಅಧಿಕಾರ ಸ್ವೀಕರಿಸಿದರು.
ಅವರು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ, ಆಯುಕ್ತರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

More Stories
ಶ್ರೀವಲಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ: ಮೊಬೈಲ್ ದಾಸರಾಗಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು
ರೈತ ಹೋರಾಟಗಾರ ಶ್ರೀಧರ ಎಸ್. ಹೆಬ್ಬಾರ ನಿಧನ:
ಶಬರಿಮಲೈನಲ್ಲಿ ಮುರಿನಕಟ್ಟೆ ವಿವಾದ ಶೀಘ್ರ ಪರಿಹಾರಕ್ಕೆ ಅಯ್ಯಪ್ಪ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ