ಭಟ್ಕಳ: ಆನ್ಲೈನ್ ಮೂಲಕ ಔಷಧ ಮಾರಾಟ ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಕರೆಯ ಮೇರೆಗೆ ನಾರ್ಥ್ ಕೆನರಾ ಕೆಮಿಸ್ಟ್ & ಡ್ರಗ್ಗಿಸ್ಟ್ ಅಸೋಸಿಯೇಶನ್ನ ಭಟ್ಕಳ ತಾಲೂಕು ಘಟಕ ಬುಧವಾರ ಮುಷ್ಕರ ನಡೆಸಿತು.

ಭಟ್ಕಳ ನಗರ, ಗ್ರಾಮೀಣ ಹಾಗೂ ಮುರುಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 36 ಔಷಧ ಅಂಗಡಿಗಳು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದವು. ಆನ್ಲೈನ್ ಔಷಧ ಮಾರಾಟಕ್ಕೆ ಅವಕಾಶ ನೀಡಿರುವುದರಿಂದ ಔಷಧ ವ್ಯಾಪಾರಿಗಳು, ವಿತರಕರು ಹಾಗೂ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಸಂಘಟಕರು ಆತಂಕ ವ್ಯಕ್ತಪಡಿಸಿದರು. ಗುಣಮಟ್ಟವಿಲ್ಲದ ಔಷಧಗಳ ಮಾರಾಟ ಹಾಗೂ ದರ ಪೈಪೋಟಿಯಿಂದ ಸಣ್ಣ ವ್ಯಾಪಾರಿಗಳಿಗೆ ತೀವ್ರ ಹೊಡೆತ ಬೀಳುತ್ತಿದೆ ಎಂದು ದೂರಿದರು.

2020ರ ಮಾರ್ಚ್ 26 ಹಾಗೂ 2018ರ ಆಗಸ್ಟ್ 28ರಂದು ಹೊರಡಿಸಿದ ಆನ್ಲೈನ್ ಔಷಧ ಮಾರಾಟ ಸಂಬAಧಿತ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು. ಕಾರ್ಪೋರೇಟ್ ಕಂಪನಿಗಳಿಗೆ ನೀಡಲಾಗುತ್ತಿರುವ ಭಾರಿ ರಿಯಾಯಿತಿ ನೀತಿಯನ್ನು ಹಿಂಪಡೆದು ಏಕರೂಪದ ರಿಯಾಯಿತಿ ದರ ಜಾರಿಗೊಳಿಸಬೇಕು. ನಕಲಿ ಹಾಗೂ ಕಲುಷಿತ ಔಷಧ ತಯಾರಿಕೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕು ಎಂದು ಆಗ್ರಹಿಸಿದರು.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ