ಭಟ್ಕಳ: ಕಂಟೇನರ್ ವಾಹನ ಹಿಂಬಾಲಿಸಿದ ವಿಚಾರಕ್ಕೆ ಸಂಬAಧಿಸಿ ಯುವಕರ ನಡುವೆ ಗಲಾಟೆ ನಡೆದು, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲಗೋಡ ಕೋಟೆಮನೆ ನಿವಾಸಿ ಹರ್ಷ ಮಂಜುನಾಥ ನಾಯ್ಕ (21) ನೀಡಿದ ದೂರಿನ ಮೇರೆಗೆ ಸುಲ್ತಾನ್ ಸ್ಟ್ರೀಟ್ನ ಇದ್ರಿಸ್ ಅಬ್ಬಾಸ್ ರೊಡ್ಡಾ, ಉಸ್ಮಾನ್ ಸ್ಟ್ರೀಟ್ನ ಅಮಾನ್ ಹಕೀಂ ಮೊತೇಶ್ಯಾಮ್ ಹಾಗೂ ಮತ್ತೋರ್ವ ಅಪರಿಚಿತ ಯುವಕ ವಿರುದ್ಧ ಪ್ರಕರಣ ದಾಖಲಾಗಿದೆ.


ದೂರಿನ ಪ್ರಕಾರ, ಗುರುವಾರ ಮಧ್ಯರಾತ್ರಿ ಹರ್ಷ ಅವರು ಸ್ನೇಹಿತರಾದ ಮಧುರ ಮಂಜುನಾಥ ನಾಯ್ಕ ಮತ್ತು ಸಚಿನ್ ಗೋವಿಂದ ನಾಯ್ಕ ಅವರೊಂದಿಗೆ ಬೈಕ್ನಲ್ಲಿ ಸಬ್ಬತ್ತಿ ಕಡೆಯಿಂದ ಬರುತ್ತಿದ್ದರು. ರಾಘವೇಂದ್ರ ಮಠದ ಸಮೀಪದ ಮಾರೂತಿ ಸುಜುಕಿ ಶೋರೂಂ ಬಳಿ ಕಂಟೇನರ್ ವಾಹನದ ಹಿಂದೆ ಸಾಗುತ್ತಿದ್ದ ವೇಳೆ ಎರಡು ಬೈಕ್ಗಳಲ್ಲಿ ಬಂದ ಆರೋಪಿತರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ.

ಕಂಟೇನರ್ ಯಾಕೆ ಹಿಂಬಾಲಿಸುತ್ತಿದ್ದೀರಿ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿ, ಹರ್ಷ ಹಾಗೂ ಅವರ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಚಿನ್ ಗೋವಿಂದ ನಾಯ್ಕ ಅವರ ಶರ್ಟ್ ಹರಿದು ಹಾಕಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ನಂತರ ಪೊಲೀಸ್ ಠಾಣೆ ಎದುರಲ್ಲಿಯೂ ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ