ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಅಥಣಿ ಪಟ್ಟಣದಲ್ಲಿ ಇಂದು ಸಾಯಂಕಾಲ ಭಾರೀ ಬಿರುಗಾಳಿ ಸಮೇತ ಅಲ್ಪ ಪ್ರಮಾಣದ ಮಳೆಯಾಗಿದ್ದು, ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆಗಳು ವರದಿಯಾಗಿವೆ.


ಅಥಣಿಯ ನ್ಯಾಯಾಲಯದ ಎದುರಿನಲ್ಲಿರುವ ಜೆ.ಎ ಹೈಸ್ಕೂಲ್ ಕಾಂಪ್ಲೆಕ್ಸ್ ಮುಂಭಾಗದಲ್ಲಿ ದೊಡ್ಡ ಮರ ಹಾಗೂ ವಿದ್ಯುತ್ ತಂತಿಗಳು ಬಿದ್ದಿದ್ದು, ಸಾರ್ವಜನಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಇದೇ ವೇಳೆ ಐನಾಪುರ್ ರಸ್ತೆಯಲ್ಲಿರುವ ಅಥಣಿ ಪ್ರವಾಸಿ ಮಂದಿರದ ಎದುರು ಗಿಡಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಸದ್ಯ ಈ ಅವಘಡಗಳಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ ಎಂದು ತಿಳಿದುಬಂದಿದೆ. ಆದರೆ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಜನಜೀವನದಲ್ಲಿ ವ್ಯತ್ಯಯ ಉಂಟಾಗಿದೆ. ಇಂತಹ ಅಕಸ್ಮಿಕ ಗಾಳಿ-ಮಳೆಯ ಸಂದರ್ಭಗಳಲ್ಲಿ ಸಾರ್ವಜನಿಕರು ಜಾಗರೂಕರಾಗಿ ಇರಬೇಕು ಎಂದು ಜೆಡಿಎಸ್ ಪಕ್ಷದ ಮುಖಂಡ ಇಮತಿಯಾಜ್ ಹಿಪ್ಪರಗಿ ಮನವಿ ಮಾಡಿದ್ದಾರೆ.


ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.
ವರದಿ : ಮಹೇಶ್ ಶರ್ಮಾ, ಬೆಳಗಾವಿ

More Stories
ಶಿವಯೋಗಿ ನಗರದಲ್ಲಿ ಕಣ್ಣು ಮುಚ್ಚಿ ಕುಳಿತ ಹೆಸ್ಕಾಂ; ಲೈವ್ ವೈರ್ ಕಟ್ ಆಗಿದ್ದರೂ ಕರಗದ ಅಧಿಕಾರಿಗಳ ನಿರ್ಲಕ್ಷ್ಯ
ಮಾದರಿ ಹಸಿರು ಕಾರ್ಯಕ್ರಮ: ಅಥಣಿಯಲ್ಲಿ ‘ಭರವಸೆ ಬೆಳಕು ಫೌಂಡೇಶನ್’ ವತಿಯಿಂದ ಅದ್ದೂರಿ ಸಸಿ ನೆಡುವ ಅಭಿಯಾನ
ಬೆಳಗಾವಿ ಜಿಲ್ಲೆ ಅಥಣಿ ತಾಲೂಕು: ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಅವರಿಗೆ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯಿಂದ ಸನ್ಮಾನ