May 29, 2026

ಮೃತರ ಕುಟುಂಬಗಳಿಗೆ ಕಾಗೇರಿ ಸಾಂತ್ವನ

ಭಟ್ಕಳ: ಶಿರಾಲಿಯ ತಟ್ಟಿಹಕ್ಕಲು ಹೊಳೆಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸುವ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಮನೆಗೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತರ ಮನೆಗಳಿಗೆ ತೆರಳಿ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ ಅವರು, ದುರ್ಘಟನೆ ಅತ್ಯಂತ ನೋವು ತಂದಿದ್ದು, ಕುಟುಂಬದ ದುಃಖದಲ್ಲಿ ತಾವು ಭಾಗಿಯಾಗಿದ್ದೇವೆ ಎಂದರು. ಕೇಂದ್ರ ಸರ್ಕಾರದಿಂದ ಈಗಾಗಲೇ ಪರಿಹಾರ ಘೋಷಣೆಗೊಂಡಿದ್ದು, ಸರ್ಕಾರದಿಂದ ಇನ್ನಷ್ಟು ನೆರವು ದೊರಕಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ದುರಂತದ ಆಘಾತದಿಂದ ಮೃತರ ಕುಟುಂಬಸ್ಥರು ತೀವ್ರ ಸಂಕಷ್ಟದಲ್ಲಿದ್ದು, ಕೆಲವರು ಆಹಾರ ಸೇವಿಸದೇ ಇರುವ ಮಾಹಿತಿ ತಿಳಿದ ಹಿನ್ನೆಲೆ ಆರೋಗ್ಯದ ಹಿತದೃಷ್ಟಿಯಿಂದ ವೈದ್ಯರನ್ನು ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸುವಂತೆ ಸಂಬAಧಪಟ್ಟವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನೀಲ್ ನಾಯ್ಕ ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ,ಊರಿನ ಪ್ರಮುಖರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

About The Author

error: Content is protected !!