ಭಟ್ಕಳ: ತಾಲೂಕಿನ ತಟ್ಟೆಹಕ್ಕಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸುವ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಮನೆಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ದುರಂತದಲ್ಲಿ ಅಸುನೀಗಿದವರ ಕುಟುಂಬಗಳನ್ನು ಪ್ರತ್ಯೇಕವಾಗಿ ಭೇಟಿಯಾದ ಅವರು ದುಃಖ ಹಂಚಿಕೊAಡು ಧೈರ್ಯ ತುಂಬಿದರು. ಇದೇ ವೇಳೆ ಮೃತರ ಕುಟುಂಬಗಳಿಗೆ ವೈಯಕ್ತಿಕ ಧನಸಹಾಯ ನೀಡಿ ಮಾನವೀಯತೆ ಮೆರೆದರು.


ಈ ದುರ್ಘಟನೆ ಬಹಳ ನೋವು ತಂದಿದೆ. ಅಮಾಯಕ ಜೀವಗಳನ್ನು ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸಂಗತಿ. ಕುಟುಂಬದ ಸದಸ್ಯರ ನೋವಿನಲ್ಲಿ ನಾವು ಸಹ ಭಾಗಿಯಾಗಿದ್ದೇವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಮುಖಂಡರಾದ ನಾಗಪ್ಪ ನಾಯ್ಕ, ರಾಜು ನಾಯ್ಕ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ