May 29, 2026

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿದ ಮುಸ್ಲಿಂ ಬಾಂಧವರು ..

ಕೃಷ್ಣರಾಜಪೇಟೆ: ಪಟ್ಟಣದ ಶ್ರವಣಬೆಳಗೊಳ ರಸ್ತೆಯಲ್ಲಿರುವ ಜಾಮಿಯಾ ಮಸೀದಿಯಿಂದ ಧರ್ಮಗುರು ನೂರುದ್ದೀನ್ ಶರೀಫ್ ಅವರ ನೇತೃತ್ವದಲ್ಲಿ ಸಾಮೂಹಿಕ ಮೆರವಣಿಗೆ ನಡೆಸಿ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಈಗ ಮೈದಾನದ ಆವರಣದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿ ಪರಸ್ಪರ ಶುಭಾಶಯಗಳು ಮುಸ್ಲಿಂ ಬಾಂಧವರು ವಿನಿಮಯ ಮಾಡಿಕೊಂಡರು.

ಧರ್ಮ ಗುರು ನೂರುದ್ದೀನ್ ಶರೀಫ್ ಅವರು ಧಾರ್ಮಿಕ ಪ್ರವಚನ ನೀಡಿ ಎಲ್ಲಾ ಧರ್ಮಗಳ ಸಾರವು ಒಂದೇ ಆಗಿದ್ದು ಭಗವಂತನ ಸಾಕ್ಷಾತ್ಕಾರವನ್ನು ಹೊಂದುವುದಾಗಿದೆ ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಈ ಬಾರಿ ವಿಶೇಷವಾಗಿ ದಾನ ಧರ್ಮ ಮಾಡುವ ಮೂಲಕ ಆಚರಿಸಿಕೊಂಡು ಸಂಭ್ರಮಿಸಿದ್ದಾರೆ ಬಕ್ರೀದ್ ಹಬ್ಬವೂ ಈ ಬಾರಿ ವಿಶೇಷವಾಗಿ ನಡೆದಿದ್ದು ಬಡವರು ಶ್ರೀಮಂತರು ಎಂಬ ಭೇದ ಭಾವ ಇಲ್ಲದಂತೆ ಎಲ್ಲರೂ ಒಂದಾಗಿ ಬಕ್ರೀದ್ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿ ಸಂತೋಷದಿAದ ಬಕ್ರೀದ್ ಹಬ್ಬವನ್ನು ಆಚರಿಸಿರುವುದು ವಿಶೇಷವಾಗಿದೆ ಎಂದು ಧರ್ಮ ಗುರುಗಳು ಹೇಳಿದರು. ನಾಗಮಂಗಲ ಡಿಒ ಎಸ್ ಪಿ ಚೆಲುವರಾಜು ಹಾಗೂ ಕೆ ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು ಸಾಮೂಹಿಕ ಪ್ರಾರ್ಥನೆಯ ನಂತರ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯಗಳು ವಿನಿಮಯ ಮಾಡಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

About The Author

error: Content is protected !!