ಭಟ್ಕಳ: ಮುರುಡೇಶ್ವರದ ನಿವಾಸಿ ಹಾಗೂ ಲೇಖಕಿ ಸೀಮಾ ನಾಯ್ಕ ಅವರ ಚೊಚ್ಚಲ ಕಾದಂಬರಿ ಕಾಲದ ಗಡಿಯಾರ ಕೃತಿಯ ಲೋಕಾರ್ಪಣೆ ಸಮಾರಂಭವು ಇಲ್ಲಿನ ಮಹಿಮಾ ಇವೆಂಟ್ ಹಾಲ್ನಲ್ಲಿ ಸಂಭ್ರಮದಿAದ ನಡೆಯಿತು. ಶಿರಸಿ ಸರ್ಕಾರಿ ಪ್ರೌಢಶಾಲೆ, ಬಂಡಲದ ಮುಖ್ಯೋಪಾಧ್ಯಾಯ ರಾಜೇಶ್ ಹೆಚ್. ನಾಯಕ್ ಕೃತಿಯನ್ನು ಲೋಕಾರ್ಪಣೆಗೊಳಿಸಿ, ಸಾಹಿತ್ಯವು ಸಮಾಜದ ಚಿಂತನೆಗಳನ್ನು ರೂಪಿಸುವ ಶಕ್ತಿಯುತ ಮಾಧ್ಯಮವಾಗಿದ್ದು, ಹೊಸ ಲೇಖಕರ ಸಾಹಿತ್ಯಿಕ ಕೊಡುಗೆಗಳು ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮ ನೀಡುತ್ತವೆ ಎಂದು ಹೇಳಿದರು.

ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಡಿ.ವಿ. ಪ್ರಕಾಶ್ ಹಾಗೂ ಕವಿ-ಸಾಹಿತಿ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕೃತಿಯ ಕುರಿತು ಮಾತನಾಡಿದರು. ತಲೆಮಾರುಗಳ ನಡುವಿನ ಅಂತರ, ಬದಲಾಗುತ್ತಿರುವ ಸಾಮಾಜಿಕ ಸಂಬAಧಗಳು ಮತ್ತು ಮಾನವೀಯ ಮೌಲ್ಯಗಳನ್ನು ಒಳಗೊಂಡಿರುವ ಕೃತಿಯು ಓದುಗರಲ್ಲಿ ಚಿಂತನೆ ಮೂಡಿಸುವಂತಿದೆ ಎಂದು ಅಭಿಪ್ರಾಯಪಟ್ಟರು.

ಸಾಹಿತ್ಯಾಸಕ್ತರು, ಗಣ್ಯರು, ಸ್ನೇಹಿತರು ಹಾಗೂ ಕುಟುಂಬ ಸದಸ್ಯರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಸೀಮಾ ನಾಯ್ಕ ಅವರ ಸಾಹಿತ್ಯ ಪಯಣಕ್ಕೆ ಶುಭ ಹಾರೈಸಲಾಯಿತು. ಕಾಲದ ಗಡಿಯಾರ ಕಾದಂಬರಿಯು ಸಾಮಾಜಿಕ ಬದುಕಿನ ವಿವಿಧ ಆಯಾಮಗಳನ್ನು ತೆರೆದಿಡುವ ಪ್ರಯತ್ನವಾಗಿದ್ದು, ಓದುಗರ ಮೆಚ್ಚುಗೆ ಪಡೆಯುವ ವಿಶ್ವಾಸ ವ್ಯಕ್ತವಾಯಿತು.

More Stories
ಹಂಗಾರಖಂಡದಲ್ಲಿ ಅದ್ದೂರಿ ವನಮಹೋತ್ಸವ: ನದಿ ಅಂಚಿನಲ್ಲಿ ಹಸಿರು ಕ್ರಾಂತಿ, ಪ್ರಕೃತಿ ರಕ್ಷಣೆಗೆ ಕರೆ
ವಿಶ್ವ ಪರಿಸರ ದಿನ: ವಡೇರ ಮಠದಲ್ಲಿ ಒಂದು ಗಿಡ ಅಮ್ಮನ ಹೆಸರಲ್ಲಿ ಅಭಿಯಾನ
ವಡೇರ ಮಠದಲ್ಲಿ ಲಕ್ಷ ಕುಂಕುಮಾರ್ಚನೆ ಸಂಭ್ರಮ; 200ಕ್ಕೂ ಅಧಿಕ ಮಹಿಳೆಯರಿಂದ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆ