ಶಿರಸಿ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ರಾಜ್ಯದ 30 ಜಿಲ್ಲೆಗಳ ಪ್ರತಿನಿಧಿಗಳನ್ನು ಒಗ್ಗೂಡಿಸಿ ರಾಜ್ಯ ಸಮ್ಮೇಳನ ಹಾಗೂ ರಜತ ಮಹೋತ್ಸವ ಕಾರ್ಯಕ್ರಮವನ್ನು ತುಮಕೂರಿನ ಹೆಗ್ಗೆರೆ ಗಂಗಾಧರಯ್ಯ ಆಡಿಟೋರಿಯಂನಲ್ಲಿ ನಡೆಸಿದ್ದು ,ಈ ವೇಳೆ ಸಾಧನೆ ಮಾಡಿದ ಬೆಳ್ಳೇಕೇರಿಯ ಪೂರ್ಣಿಮಾ ಹೆಗಡೆ ಅವರನ್ನು ಗೌರವಿಸಲಾಯಿತು.


ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಅಧ್ಯಕ್ಷೆ ಉಮಾ ರೆಡ್ಡಿ, ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಪಾಂಡುರಂಗ ಕುರಾಂಡ್ವಾಡ್ ಸೇರಿದಂತೆ ಹಲವಾರು ಗಣ್ಯರು ಇಲ್ಲಿನ ಸಾತ್ವಿಕ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಹೆಗಡೆ ಅವರಿಗೆ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಉತ್ತರ ಕನ್ನಡ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಂ.ಎಂ. ಭಟ್ ಹಾಗೂ ಕಾರ್ಯದರ್ಶಿ ಗಣೇಶ್ ಹೆಗಡೆ ಉಪಸ್ಥಿತರಿದ್ದರು.


More Stories
ಡಿ.20ಕ್ಕೆ ಬೆಂಗಳೂರಿನಲ್ಲಿ ಹವ್ಯಕ ಮಹಿಳಾ ಸಮಾವೇಶ; 83 ಮಹಿಳಾ ವೇದಿಕೆಗಳ ಸ್ಥಾಪನೆಗೆ ಮಹಾಸಭೆ ನಿರ್ಧಾರ: ಡಾ. ಗಿರಿಧರ ಕಜೆ
ವಿಜಯನಗರ ಜಿಲ್ಲೆಯ ಮನೆಮನೆಗೆ ತಲುಪಲಿದೆ ಗೀತಾ ಸಂದೇಶ: ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಬೃಹತ್ ಅಭಿಯಾನ
ರೊಟೇರಿಯನ್ ಮ್ಯುಸಿಷಿಯನ್ ಐಡಲ್: ಅರುಣ್ ನಾಯಕ್ ಹಾಗೂ ರಾಘವೇಂದ್ರ ಸಕಲಾತಿ ಸಾಧನೆ