ಭಟ್ಕಳ: ದೇಶದ ಪ್ರತಿಷ್ಠಿತ ಚಾರ್ಟೆಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ತಾಲೂಕಿನ ಪ್ರಜ್ವಲ್ ಗೋಳಿ ಹಾಗೂ ಪ್ರಸಾದ ಶೆಟ್ಟಿ ಅವರು ಉತ್ತೀರ್ಣರಾಗಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.



ಇವರಿಬ್ಬರೂ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ತಮ್ಮ ಬಿ.ಕಾಂ ಪದವಿಯನ್ನು ಪೂರೈಸಿದ್ದು, ನಂತರ ಸಿಎ ತರಬೇತಿಯನ್ನು ಪಡೆದು ಈ ಮಹತ್ತರ ಯಶಸ್ಸನ್ನು ಸಾಧಿಸಿದ್ದಾರೆ.
ಪಾಲಕರಿಗೆ ಹಾಗೂ ಕಾಲೇಜಿಗೆ ತಂದ ಕೀರ್ತಿ:
ಭಟ್ಕಳದ ವೀಣಾ ಮತ್ತು ಗುರುಪ್ರಸಾದ್ ಗೋಳಿ ದಂಪತಿಗಳ ಪುತ್ರರಾದ ಪ್ರಜ್ವಲ್ ಗೋಳಿ ಹಾಗೂ ಶಿರೂರಿನ ಶಿಕ್ಷಕಿ ಪ್ರೇಮಾ ಶೆಟ್ಟಿ ಮತ್ತು ಶ್ರೀಕಾಂತ್ ಶೆಟ್ಟಿ ದಂಪತಿಗಳ ಪುತ್ರರಾದ ಪ್ರಸಾದ್ ಶೆಟ್ಟಿ ಅವರು ಈ ಕಠಿಣ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ತಮ್ಮ ಹೆತ್ತವರಿಗೆ ಹಾಗೂ ಓದಿದ ಕಾಲೇಜಿಗೆ ಅಪಾರ ಕೀರ್ತಿ ತಂದಿದ್ದಾರೆ.

ಗಣ್ಯರ ಹರ್ಷ ಮತ್ತು ಶುಭ ಹಾರೈಕೆ:
ಯುವ ಸಾಧಕರ ಈ ಗಮನಾರ್ಹ ಸಾಧನೆಗೆ ಅವರ ಕುಟುಂಬದವರು, ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಕಾಲೇಜಿನ ಪ್ರಾಚಾರ್ಯರು, ಪ್ರಾಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಹಾಗೂ ಹಿತೈಷಿಗಳು ತೀವ್ರ ಹರ್ಷ ವ್ಯಕ್ತಪಡಿಸಿದ್ದು, ಅವರ ಮುಂದಿನ ವೃತ್ತಿ ಜೀವನಕ್ಕೆ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ.

More Stories
ಪ್ರತಿಷ್ಠಿತ ‘ಡಿಜಿ-ಐಜಿಪಿ ಶ್ಲಾಘನಾ ಪದಕ’ ಗೌರವಕ್ಕೆ ಭಾಜನರಾದ ಭಟ್ಕಳದ ಹೆಡ್ ಕಾನ್ಸ್ಟೇಬಲ್ ದೀಪಕ್ ನಾಯ್ಕ
ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸಿಗೆ ಇಲಾಖೆಗಳ ಸಮನ್ವಯ ಅಗತ್ಯ: ಪ್ರಭಾರಿ ತಹಶೀಲ್ದಾರ್ ಪ್ರವೀಣ್ ಕಾರಂಡೆ
ಪರಿಸರ ಸಂರಕ್ಷಣೆಗೆ ಅರಣ್ಯವಾಸಿಗಳ ಪಣ; ೧೩ ಗ್ರಾ.ಪಂ ವ್ಯಾಪ್ತಿಯಲ್ಲಿ ದಶಲಕ್ಷ ಗಿಡ ನೆಡುವ ಅಭಿಯಾನಕ್ಕೆ ಚಾಲನೆ