July 15, 2026

ಮಾದರಿ ಹಸಿರು ಕಾರ್ಯಕ್ರಮ: ಅಥಣಿಯಲ್ಲಿ ‘ಭರವಸೆ ಬೆಳಕು ಫೌಂಡೇಶನ್’ ವತಿಯಿಂದ ಅದ್ದೂರಿ ಸಸಿ ನೆಡುವ ಅಭಿಯಾನ

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭರವಸೆ ಬೆಳಕು ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಸಂರಕ್ಷಣೆ ಜಾಗೃತಿ ಹಾಗೂ ಬೃಹತ್ ಸಸಿ ನೆಡುವ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ಜರುಗಿತು.
ಸ್ಥಳೀಯ ಅರಣ್ಯ ಪ್ರದೇಶದಲ್ಲಿ ಹಸಿರು ಪರಿಸರವನ್ನು ನಿರ್ಮಿಸುವ ಮತ್ತು ಕಾಡು ಬೆಳೆಸುವ ಉದಾತ್ತ ಉದ್ದೇಶದಿಂದ ವಿವಿಧ ತಳಿಯ ನೂರಾರು ಉಪಯುಕ್ತ ಸಸಿಗಳನ್ನು ನೆಡಲಾಯಿತು.

ಪರಿಸರ ಸಮತೋಲನಕ್ಕೆ ಮರಗಳು ಅತ್ಯಗತ್ಯ:

ಇದೇ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಿ ಮಾತನಾಡಿದ ಸಂಸ್ಥೆಯ ಪ್ರಮುಖರು, “ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಏರುತ್ತಿದ್ದು, ಮರಗಳು ಪರಿಸರದ ಸಮತೋಲನವನ್ನು ಕಾಪಾಡಲು ಅತ್ಯಗತ್ಯವಾಗಿವೆ. ಜೀವ ವೈವಿಧ್ಯತೆಯನ್ನು ಉಳಿಸಲು ಮತ್ತು ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಹಾಗೂ ಉತ್ತಮ ವಾತಾವರಣವನ್ನು ಒದಗಿಸಲು ಪ್ರತಿಯೊಬ್ಬರೂ ಕನಿಷ್ಠ ಒಂದೊಂದು ಸಸಿಯನ್ನಾದರೂ ನೆಟ್ಟು ಪೋಷಿಸಬೇಕು,” ಎಂದು ಕರೆ ನೀಡಿದರು.

ಮಹಿಳಾ ಶಕ್ತಿಯ ನೇತೃತ್ವ:

ಈ ವಿಶೇಷ ಹಸಿರು ಅಭಿಯಾನದ ನೇತೃತ್ವವನ್ನು ಭರವಸೆ ಬೆಳಕು ಫೌಂಡೇಶನ್ ಅಧ್ಯಕ್ಷರಾದ ಶ್ರೀಮತಿ ರೂಪಾ ಕಾಂಬಳೆ ಹಾಗೂ ಪ್ರಮುಖರಾದ ಶ್ರೀಮತಿ ಗೀತಾ ಮಡ್ಡಿ ಅವರು ಜಂಟಿಯಾಗಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಕ್ರಿಯ ಸದಸ್ಯರಾದ ಶ್ರೀಮತಿ ಸವಿತಾ ಕಾಂಬಳೆ ಸೇರಿದಂತೆ ಫೌಂಡೇಶನ್‌ನ ಎಲ್ಲಾ ಪದಾಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಊರಿನ ಅನೇಕ ಪ್ರಮುಖರು ಉಪಸ್ಥಿತರಿದ್ದು, ಸ್ವತಃ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.                                                    ವರದಿ : ಮಹೇಶ ಶರ್ಮ

About The Author

error: Content is protected !!