ಭಟ್ಕಳ: ತಾಲೂಕಿನ ಮುಟ್ಟಳ್ಳಿ-ಮೂಡಭಟ್ಕಳದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸುಸೂತ್ರವಾಗಿ ನಡೆದಿದ್ದು, ನೂತನ ಅಧ್ಯಕ್ಷರಾಗಿ ಶ್ರೀನಿವಾಸ ಶಿವರಾಮ ನಾಯ್ಕ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸಮಿತಿಯ ಮಹತ್ವದ ಸಭೆಯಲ್ಲಿ ಮುಂಬರುವ ಸಾಲಿನ ಉತ್ಸವಕ್ಕಾಗಿ ನೂತನ ಪದಾಧಿಕಾರಿಗಳ ತಂಡವನ್ನು ರಚಿಸಲಾಯಿತು.

ನೂತನ ಪದಾಧಿಕಾರಿಗಳ ವಿವರ:
- ಅಧ್ಯಕ್ಷರು: ಶ್ರೀನಿವಾಸ ಶಿವರಾಮ ನಾಯ್ಕ ಉಪಾಧ್ಯಕ್ಷರು: ಮಂಜುನಾಥ ಕೃಷ್ಣ ನಾಯ್ಕ ಕಾರ್ಯದರ್ಶಿ: ಕುಮಾರ್ ಹನುಮಂತ ನಾಯ್ಕ ಸಹ ಕಾರ್ಯದರ್ಶಿ: ಶರತ್ ಶ್ರೀಧರ್ ನಾಯ್ಕ ಖಜಾಂಚಿ: ಕೌಶಿಕ್ ಕೃಷ್ಣ ನಾಯ್ಕ
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಹಾರ್ದಿಕವಾಗಿ ಅಭಿನಂದಿಸಿದರು.
ಬಳಿಕ ಜವಾಬ್ದಾರಿ ವಹಿಸಿಕೊಂಡು ಮಾತನಾಡಿದ ನೂತನ ಅಧ್ಯಕ್ಷ ಶ್ರೀನಿವಾಸ ಶಿವರಾಮ ನಾಯ್ಕ ಅವರು, “ಮುಂಬರುವ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಉತ್ಸವದ ಯಶಸ್ಸಿಗೆ ಊರಿನ ಹಿರಿಯರು, ಸಮಿತಿಯ ಪದಾಧಿಕಾರಿಗಳು ಹಾಗೂ ಎಲ್ಲ ಸದಸ್ಯರ ಸಹಕಾರ ಅತ್ಯಗತ್ಯ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಮಾಜಿ ಅಧ್ಯಕ್ಷ ವೆಂಕಟರಮಣ ನಾಯ್ಕ, ಸುರೇಶ್ ನಾಯ್ಕ, ವೆಂಕಟೇಶ ನಾಯ್ಕ, ರವಿಚಂದ್ರನ್ ನಾಯ್ಕ, ಊರಿನ ಹಿರಿಯರಾದ ಶನಿಯಾರ ನಾಯ್ಕ, ಗಣೇಶ ನಾಯ್ಕ ಸೇರಿದಂತೆ ಸಮಿತಿಯ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವೆಂಕಟೇಶ ತಿಮಯ್ಯ ನಾಯ್ಕ ನಿರೂಪಿಸಿ, ಕೊನೆಯಲ್ಲಿ ವಂದನಾರ್ಪಣೆ ಮಾಡಿದರು.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ