July 15, 2026

ಭಾರತೀಯ ಸಂಘಟನೆಗಳ ಒಗ್ಗಟ್ಟು ಮತ್ತು ಸಮನ್ವಯತೆಯಿಂದ ಮಾತ್ರ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಶ್ರೀ ಸಂದೀಪ್ ಕುಮಾರ್

ಕತಾರ್ ಉಪ ರಾಯಭಾರಿಗಳನ್ನು ಭೇಟಿ ಮಾಡಿದ ಕರ್ನಾಟಕ ಸಂಘ ಕತಾರ್ (KSQ) ನೂತನ ವ್ಯವಸ್ಥಾಪನಾ ಸಮಿತಿ

ದೋಹಾ, ಕತಾರ್: ಕತಾರ್‌ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಹಾಗೂ ಭಾರತದ ಭವ್ಯ ಪರಂಪರೆಯನ್ನು ಇಲ್ಲಿನ ನೆಲದಲ್ಲಿ ವಿಸ್ತಾರವಾಗಿ ಪಸರಿಸುವ ನಿಟ್ಟಿನಲ್ಲಿ, ರ‍್ನಾಟಕ ಸಂಘ ಕತಾರ್ (ಕೆ ಎಸ್ ಕ್ಯೂ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿಗಳಾದ (ಡೆಪ್ಯುಟಿ ಚೀಫ್ ಆಫ್ ಮಿಷನ್) ಮಾನ್ಯ ಶ್ರೀ ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು.

ಸಂಘದ ಅಧ್ಯಕ್ಷರಾದ ಮಾನ್ಯ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯ ಸರ‍್ಭದಲ್ಲಿ, 2026-28ನೇ ಸಾಲಿನ ನೂತನ ಸಮಿತಿಯು ತನ್ನ ಪದಾಧಿಕಾರಿಗಳನ್ನು ಪರಿಚಯಿಸಿತಲ್ಲದೆ, ಮುಂಬರುವ ಎರಡು ರ‍್ಷಗಳ ಅವಧಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯ ಸಮಾಜಮುಖಿ ರ‍್ಯಕ್ರಮಗಳ ಪ್ರಗತಿಪರ ರೂಪುರೇಷೆಗಳನ್ನು ಅಧಿಕಾರಿಗಳ ಮುಂದೆ ಪ್ರಸ್ತುತಪಡಿಸಿತು.

ಒಗ್ಗಟ್ಟಿನ ರ‍್ಯಕ್ರಮಗಳಿಗೆ ಉಪ ರಾಯಭಾರಿಗಳ ಕರೆ:
ಸಭೆಯಲ್ಲಿ ಕತಾರ್‌ನಲ್ಲಿರುವ ವಿಶಾಲ ಭಾರತೀಯ ಸಮುದಾಯದ ಕ್ರಿಯಾಶೀಲತೆ ಮತ್ತು ಬೆಳವಣಿಗೆಯನ್ನು ಶ್ಲಾಘಿಸಿದ ಉಪ ರಾಯಭಾರಿ ಮಾನ್ಯ ಶ್ರೀ ಸಂದೀಪ್ ಕುಮಾರ್ ಅವರು, ಸಮುದಾಯದ ಒಟ್ಟಾರೆ ಏಳಿಗೆಗಾಗಿ ಹೆಚ್ಚು ಅರ‍್ಗತ ಮತ್ತು ಒಗ್ಗಟ್ಟಿನ ಕೆಲಸದ ಅಗತ್ಯತೆಯನ್ನು ಪ್ರತಿಪಾದಿಸಿದರು. ಬೃಹತ್ ಪ್ರಮಾಣದ ಸಮುದಾಯ ಆಚರಣೆಗಳು ಮತ್ತು ಸಮಾಜಮುಖಿ ರ‍್ಯಕ್ರಮಗಳನ್ನು ಆಯೋಜಿಸುವಾಗ ಎಲ್ಲರನ್ನೂ ಒಳಗೊಳ್ಳುವ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಇದಕ್ಕಾಗಿ ಕತಾರ್‌ನಲ್ಲಿ ರಾಯಭಾರ ಕಚೇರಿಯ ಅಡಿಯಲ್ಲಿ ರ‍್ಯರ‍್ವಹಿಸುತ್ತಿರುವ ಇತರ ಭಾರತೀಯ ಅಗ್ರಗಣ್ಯ ಸಂಸ್ಥೆಗಳು ಹಾಗೂ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಗಳೊAದಿಗೆ ನಿಕಟ ಸರ‍್ಕ ಸಾಧಿಸಿ, ಅತ್ಯಂತ ನಿಕಟವಾಗಿ ಮತ್ತು ಒಟ್ಟಾಗಿ ರ‍್ಯಕ್ರಮಗಳನ್ನು ರೂಪಿಸುವಂತೆ ಅವರು ಕೆ ಎಸ್ ಕ್ಯೂ ನಾಯಕತ್ವಕ್ಕೆ ಪ್ರಮುಖ ಸಲಹೆ ನೀಡಿದರು. “ಎಲ್ಲಾ ಸಂಘಟನೆಗಳ ಸಾಮೂಹಿಕ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕವೇ ಭಾರತದ ವಿಭಿನ್ನ ಹಾಗೂ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಕತಾರ್‌ನಲ್ಲಿ ಇನ್ನಷ್ಟು ವ್ಯಾಪಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರ‍್ಶಿಸಲು ಸಾಧ್ಯವಾಗುತ್ತದೆ,” ಎಂದು ಮಾನ್ಯ ಶ್ರೀ ಸಂದೀಪ್ ಕುಮಾರ್ ಅವರು ಈ ಸರ‍್ಭದಲ್ಲಿ ಪ್ರಮುಖವಾಗಿ ಉಲ್ಲೇಖಿಸಿದರು.

ಕೆ ಎಸ್ ಕ್ಯೂ ಭರವಸೆ ಮತ್ತು ಗೌರವ ಸಲ್ಲಿಕೆ:
ಉಪ ರಾಯಭಾರಿಗಳ ಈ ಅಮೂಲ್ಯವಾದ ಆಶಯಕ್ಕೆ ಪೂರಕವಾಗಿ ಮುಂಬರುವ ದಿನಗಳಲ್ಲಿ ಸಹಭಾಗಿತ್ವ ಮತ್ತು ಎಲ್ಲರನ್ನೂ ಒಳಗೊಳ್ಳುವ ವಿಶಿಷ್ಟ ರ‍್ಯಕ್ರಮಗಳನ್ನು ರೂಪಿಸುವುದಾಗಿ ರ‍್ನಾಟಕ ಸಂಘದ ಸಮಿತಿ ಭರವಸೆ ನೀಡಿತು. ಅತ್ಯಂತ ಯಶಸ್ವಿಯಾಗಿ ಮೂಡಿಬಂದ ಈ ಮಾತುಕತೆಯ ಕೊನೆಯಲ್ಲಿ ಉಪ ರಾಯಭಾರಿ ಮಾನ್ಯ ಶ್ರೀ ಸಂದೀಪ್ ಕುಮಾರ್ ಅವರಿಗೆ ಸಾಂಪ್ರದಾಯಿಕ ಶಲ್ಯ ಹೊದಿಸಿ, ನೆನಪಿನ ಕಾಣಿಕೆ ನೀಡಿ ಹೃತ್ರ‍್ವಕವಾಗಿ ಗೌರವಿಸಲಾಯಿತು

About The Author

error: Content is protected !!