July 25, 2026

ಇಡಗುಂಜಿ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಗಾನ ಕೋಗಿಲೆ ರಾಜೇಶ್ ಕೃಷ್ಣನ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಹೋನ್ನಾವರ : ಕನ್ನಡ ಚಿತ್ರರಂಗದ ಸುಪ್ರಸಿದ್ಧ ಹಾಗೂ ಜನಪ್ರಿಯ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್ ಅವರು ಇಂದು ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಇಡಗುಂಜಿಯ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.


ದೇವಸ್ಥಾನಕ್ಕೆ ಆಗಮಿಸಿದ ರಾಜೇಶ್ ಕೃಷ್ಣನ್ ಅವರನ್ನು ಅರ್ಚಕ ವೃಂದ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡಿತು. ಬಳಿಕ ಅವರು ವಿಘ್ನನಿವಾರಕ ಇಡಗುಂಜಿ ಶ್ರೀ ಮಹಾಗಣಪತಿಗೆ ಶ್ರದ್ಧಾ-ಭಕ್ತಿಯಿಂದ ಪೂಜೆ ಸಲ್ಲಿಸಿ, ಪ್ರಾರ್ಥನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ವಿಷ್ಣು ಭಟ್ಟರು ಪೂಜಾ ವಿಧಿ-ವಿಧಾನಗಳನ್ನು ಸಾಂಗವಾಗಿ ನೆರವೇರಿಸಿ, ರಾಜೇಶ್ ಕೃಷ್ಣನ್ ಅವರಿಗೆ ದೇವರ ಪ್ರಸಾದ ನೀಡಿ ಆಶೀರ್ವದಿಸಿದರು.

“ಇಡಗುಂಜಿಯ ಪವಿತ್ರ ಕ್ಷೇತ್ರದಲ್ಲಿ ಶ್ರೀ ಮಹಾಗಣಪತಿಯ ದರ್ಶನ ಪಡೆದು ಪೂಜೆಯಲ್ಲಿ ಭಾಗವಹಿಸಿದ್ದು ಮನಸ್ಸಿಗೆ ಅತ್ಯಂತ ಶಾಂತಿ ಮತ್ತು ಸಂತಸ ತಂದಿದೆ” ಎಂದು ಗಾಯಕ ರಾಜೇಶ್ ಕೃಷ್ಣನ್ ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.

About The Author

error: Content is protected !!