ಭಟ್ಕಳ: ವೃಂದಾವನಸ್ಥ ಪರಮಪೂಜ್ಯ ಶ್ರೀಮದ್ ವಿದ್ಯಾಧೀರಾಜ ತೀರ್ಥ ಶ್ರೀಪಾದ್ ವಡೇರ ಸ್ವಾಮೀಜಿಯವರ 5ನೇ ವರ್ಷದ ಆರಾಧನಾ ಮಹೋತ್ಸವದ ಅಂಗವಾಗಿ ಭಟ್ಕಳದ ಶ್ರೀ ಗುರು ವಿದ್ಯಾಧೀರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನಲ್ಲಿ ಶುಕ್ರವಾರ ವಿಶೇಷ ಪೂಜೆ ಹಾಗೂ ಆರಾಧನಾ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ನೆರವೇರಿತು.
ವಿಶೇಷ ಪೂಜೆ ಹಾಗೂ ಪ್ರಾರ್ಥನೆ
ಆರಾಧನಾ ಮಹೋತ್ಸವದ ಅಂಗವಾಗಿ ಕಾಲೇಜಿನಲ್ಲಿ ಗುರುಸ್ಮರಣೆ, ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ವಿದ್ಯಾರ್ಥಿಗಳ ಉಜ್ವಲ ಭವಿಷ್ಯ, ಉತ್ತಮ ಆರೋಗ್ಯ, ಶೈಕ್ಷಣಿಕ ಪ್ರಗತಿ, ಸನ್ನಡತೆ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಶ್ರೀ ಹರಿ-ಗುರುಗಳ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಶ್ರೀಗಳ ಆದರ್ಶಗಳು ಸ್ಫೂರ್ತಿದಾಯಕ: ಡಾ. ವೀರೇಂದ್ರ ಶಾನಭಾಗ್
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ವೀರೇಂದ್ರ ವಿ. ಶಾನಭಾಗ್ ಮಾತನಾಡಿ, “ಶ್ರೀಮದ್ ವಿದ್ಯಾಧೀರಾಜ ತೀರ್ಥ ಶ್ರೀಪಾದರು ಸಮಾಜಮುಖಿ ಸೇವೆಗಳ ಮೂಲಕ ಸಾವಿರಾರು ಭಕ್ತರ ಬದುಕಿಗೆ ಸನ್ಮಾರ್ಗ ತೋರಿದ ಮಹಾನ್ ಯತಿಗಳಾಗಿದ್ದರು. ಅವರ ದಿವ್ಯ ಆದರ್ಶಗಳು ಇಂದಿಗೂ ನಮಗೆಲ್ಲರಿಗೂ ಸ್ಫೂರ್ತಿದಾಯಕವಾಗಿವೆ,” ಎಂದರು.
ಮುಂದುವರಿದು, “ಆರಾಧನಾ ಮಹೋತ್ಸವವು ನಮ್ಮ ಪವಿತ್ರ ಗುರುಪರಂಪರೆಯ ಮಹತ್ವವನ್ನು ಸಾರುವ ಆಚರಣೆಯಾಗಿದೆ. ಶ್ರೀಗಳ ಅನುಗ್ರಹದಿಂದ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆ ಮಾಡಿ ಸಮಾಜಕ್ಕೆ ಆದರ್ಶ ಪ್ರಜೆಗಳಾಗಿ ರೂಪುಗೊಳ್ಳಲಿ,” ಎಂದು ಶುಭ ಹಾರೈಸಿದರು.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ