September 8, 2026

ಚಿಕ್ಕಬಳ್ಳಾಪುರ ಅಗ್ನಿಶಾಮಕ ಇಲಾಖೆಯ ಸಮಯಪ್ರಜ್ಞೆ: ಆಳವಾದ ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಸಿಬ್ಬಂದಿ

ಚಿಕ್ಕಬಳ್ಳಾಪುರ: ತಾಲೂಕಿನ ಕಡಶಿಗೆನಹಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ನಾಯಿಯೊಂದನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಾಹಸದಿಂದ ರಕ್ಷಿಸಿದ್ದಾರೆ.

ಘಟನೆಯ ವಿವರ: ಕಡಶಿಗೆನಹಳ್ಳಿಯ ಕೃಷ್ಣಮ್ಮ ಎಂಬುವವರ ಜಮೀನಿನಲ್ಲಿರುವ ಸುಮಾರು 30 ಅಡಿ ಆಳದ ತೆರೆದ ಬಾವಿಗೆ ನಾಯಿಯೊಂದು ಆಕಸ್ಮಿಕವಾಗಿ ಬಿದ್ದಿತ್ತು. ಬಾವಿಯಲ್ಲಿ ನೀರಿಲ್ಲದಿದ್ದರೂ ಆಳ ಹೆಚ್ಚಿದ್ದರಿಂದ ನಾಯಿ ಮೇಲಕ್ಕೆ ಬರಲಾಗದೆ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು.

ಸಾಹಸಮಯ ರಕ್ಷಣಾ ಕಾರ್ಯಾಚರಣೆ: ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಸುಮಾರು ಒಂದೂವರೆ ಗಂಟೆಗಳ ಕಾಲ ಶ್ರಮಿಸಿದರು. ಹಗ್ಗ ಹಾಗೂ ಬಲೆಗಳ ಸಹಾಯದಿಂದ ಬಾವಿಗಿಳಿದು ನಾಯಿಗೆ ಯಾವುದೇ ಗಾಯವಾಗದಂತೆ ಸುರಕ್ಷಿತವಾಗಿ ಮೇಲಕ್ಕೆತ್ತಿ ಜೀವದಾನ ಮಾಡಿದರು.

ಸಿಬ್ಬಂದಿಗೆ ಕೃತಜ್ಞತೆ: ಅಗ್ನಿಶಾಮಕ ಸಿಬ್ಬಂದಿಯ ಈ ಸಮಯಪ್ರಜ್ಞೆ ಹಾಗೂ ತ್ವರಿತ ಕಾರ್ಯಚರಣೆಗೆ ಕಡಶಿಗೆನಹಳ್ಳಿ ಗ್ರಾಮಸ್ಥರು ಮುಕ್ತಕಂಠದಿಂದ ಶ್ಲಾಘಿಸಿ ಧನ್ಯವಾದ ಅರ್ಪಿಸಿದರು.

    ಈ ಕಾರ್ಯಾಚರಣೆಯಲ್ಲಿ ಪ್ರಮುಖ ಅಗ್ನಿಶಾಮಕರಾದ ರವೀಂದ್ರ ಸಂಗಮ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಡಿವಾಳರ ಬಸವರಾಜ, ರಾಜು ಮುರಕುಟ್ಟಿ, ದತ್ತಾತ್ರೇಯ ಹಾಗೂ ಬೋರಗಾವಿ ಪಾಲ್ಗೊಂಡಿದ್ದರು.       ವರದಿ : ಮಹೇಶ ಶರ್ಮ

    About The Author

    error: Content is protected !!