September 8, 2026

ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ

ಶಿರಸಿ: ಸರ್ವೇ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವಾ ನಿವೃತ್ತಿ ಹೊಂದಿದ್ದ ನಗರದ ಅಶ್ವಿನಿ ಸರ್ಕಲ್ ನಿವಾಸಿ ರಾಮಚಂದ್ರ ನಾರಾಯಣ ಶೆಟ್ಟಿ (80) ಅವರು ಅನಾರೋಗ್ಯದಿಂದ ನಿಧನರಾದರು.

ಮೂಲತಃ ಹೊನ್ನಾವರ ತಾಲೂಕಿನ ಕರ್ಕಿಯವರಾದ ರಾಮಚಂದ್ರ ಶೆಟ್ಟಿಯವರು ಸರ್ವೇ ಇಲಾಖೆಯಲ್ಲಿ 35 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಶಿರಸಿ, ಕಾರವಾರ, ಕುಮಟಾ, ಕುಂದಾಪುರ, ಮುಲ್ಕಿ, ಬಳ್ಳಾರಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಸಹಾಯಕ ನಿರ್ದೇಶಕರಾಗಿ ನಿವೃತ್ತರಾಗಿದ್ದರು.

ಸಾತ್ವಿಕ ಸ್ವಭಾವದ ಇವರು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಭಕ್ತಿ ಹೊಂದಿದ್ದರು ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಕಾಯ್ದುಕೊಂಡಿದ್ದರು. ಮೃತರು ಪತ್ನಿ, ಹಿರಿಯ ಪತ್ರಕರ್ತ ಪ್ರದೀಪ ಶೆಟ್ಟಿ ಸೇರಿದಂತೆ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

    ಮೃತರ ಅಂತ್ಯಕ್ರಿಯೆಯು ಸೆಪ್ಟೆಂಬರ್ 3ರ ಬೆಳಿಗ್ಗೆ 8.30ಕ್ಕೆ ಶಿರಸಿ ನಗರದ ನೆಮ್ಮದಿ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    About The Author

    error: Content is protected !!