ಭಟ್ಕಳ: ಮಠದಹಿಟ್ಟು ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಯುವ ಮೀನುಗಾರ ಅಸ್ವಸ್ಥನಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಮಠದಹಿಟ್ಟು ಮೂಲದ ಯಶವಂತ ಮಂಜುನಾಥ ಮೊಗೇರ (35) ಪಾತಿ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಬಲೆ ಬಿಡುತ್ತಿದ್ದಾಗ ಹಠಾತ್ ಅಸ್ವಸ್ಥನಾಗಿ ದೋಣಿಯಲ್ಲೇ ಕುಸಿದು ಬಿದ್ದನು. ತಕ್ಷಣವೇ ಸಹೋದ್ಯೋಗಿಗಳು ಅವನನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ಈ ಸಂಬAಧ ದೇವಿದಾಸ ಮೊಗೇರ ನೀಡಿದ ದೂರಿನ ಮೇರೆಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ