ಭಟ್ಕಳ: ಮಠದಹಿಟ್ಟು ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಯುವ ಮೀನುಗಾರ ಅಸ್ವಸ್ಥನಾಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ.
ಮಠದಹಿಟ್ಟು ಮೂಲದ ಯಶವಂತ ಮಂಜುನಾಥ ಮೊಗೇರ (35) ಪಾತಿ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಬಲೆ ಬಿಡುತ್ತಿದ್ದಾಗ ಹಠಾತ್ ಅಸ್ವಸ್ಥನಾಗಿ ದೋಣಿಯಲ್ಲೇ ಕುಸಿದು ಬಿದ್ದನು. ತಕ್ಷಣವೇ ಸಹೋದ್ಯೋಗಿಗಳು ಅವನನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ.
ಈ ಸಂಬAಧ ದೇವಿದಾಸ ಮೊಗೇರ ನೀಡಿದ ದೂರಿನ ಮೇರೆಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ