
ಭಟ್ಕಳ: ವಿಶ್ವಪ್ರಸಿದ್ಧ ಮುರುಡೇಶ್ವರದಲ್ಲಿ ಹೈದರಾಬಾದ್ ಮೂಲದ ಪ್ರವಾಸಿಗನೊಬ್ಬ ಕಳೆದುಕೊಂಡಿದ್ದ 48,190 ನಗದು ಹೊಂದಿದ ಬ್ಯಾಗ್ನ್ನು ಸ್ಥಳೀಯ ಯುವಕನೊಬ್ಬ ಪ್ರಾಮಾಣಿಕತೆಯಿಂದ ಹಿಂತಿರುಗಿಸಿದ ಘಟನೆ ಶ್ಲಾಘನೀಯವಾಗಿದೆ.
ಪ್ರವಾಸಿಗನು ದೇವಸ್ಥಾನದ ಬಳಿ ಬ್ಯಾಗ್ ಕಳೆದುಕೊಂಡಿದ್ದು, ಗರಡಿಗಡ್ಡೆಯ ವಿಷ್ಣು ನಾಗಪ್ಪ ನಾಯ್ಕ ಅವರಿಗೆ ಅದು ಸಿಕ್ಕಿತು. ತಕ್ಷಣವೇ ಅವರು ಮುರುಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದರು. ನಂತರ ಪಿಎಸ್ ಐ ಹನುಮಂತ ಬಿರಾದರ್ ಅವರ ಸಮ್ಮುಖದಲ್ಲಿ ಬ್ಯಾಗ್ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಪ್ರವಾಸಿಗರು ವಿಷ್ಣು ನಾಯ್ಕ ಅವರಿಗೆ ಧನ್ಯವಾದ ಸಲ್ಲಿಸಿದ್ದು, ಅವರ ಈ ಪ್ರಾಮಾಣಿಕ ನಡೆಗೆ ಪೊಲೀಸರು ಹಾಗೂ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
More Stories
ಭಟ್ಕಳದ ದರ್ಶನ ನಾಯ್ಕ ರಾಜ್ಯಕ್ಕೆ ಪ್ರಥಮ, ರಾಷ್ಟ್ರಮಟ್ಟಕ್ಕೆ ಭಟ್ಕಳದ ಕೀರ್ತಿ
ಕಡಸಲಗದ್ದೆ ಗಾಂಧಿ ಫಾಲ್ಸ್ ಬಳಿ ಮೊಬೈಲ್ ಕಳವು ಯತ್ನ ಇಬ್ಬರು ಬಂಧನ
ಮುರುಡೇಶ್ವರಲ್ಲಿ ನಾಲ್ವರು ಪ್ರವಾಸಿಗರ ಜೀವ ರಕ್ಷಣೆ – ಜೀವರಕ್ಷಕ ದಳದ ಸಾಹಸಕ್ಕೆ ಮೆಚ್ಚುಗೆ