ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಓಸಿ ಮಟ್ಕಾ ಜೂಗಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುರ್ಡೇಶ್ವರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲೇ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬAಧಿತನನ್ನು ಶಿರಾಲಿಯ ಮೊಗೇರಕೇರಿಯ ಪರಮೇಶ್ವರ ಮಾಸ್ತಿ ಮೊಗೇರ್ ಎಂದು ಗುರುತಿಸಲಾಗಿದೆ. ಈತನು ಮಾವಿನಕಟ್ಟಾದ ಬೈರುಮನೆ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಬಿಳಿ ಚೀಟಿಯಲ್ಲಿ ಅಂಕೆ ಸಂಖ್ಯೆ ಬರೆದು ಓಸಿ ಮಟ್ಕಾ ಜೂಗಾರಾಟ ನಡೆಸುತ್ತಿದ್ದಾನೆಂಬ ಖಚಿತ ಮಾಹಿತಿಯ ಮೇರೆಗೆ ಪಿಎಸೈ ಹನುಮಂತ ಬಿರಾದಾರ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತು.
ದಾಳಿಯ ವೇಳೆ ಓಸಿ ಮಟ್ಕಾ ಚೀಟಿಗಳು ಹಾಗೂ ?510 ನಗದು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ