ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಓಸಿ ಮಟ್ಕಾ ಜೂಗಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುರ್ಡೇಶ್ವರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲೇ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬAಧಿತನನ್ನು ಶಿರಾಲಿಯ ಮೊಗೇರಕೇರಿಯ ಪರಮೇಶ್ವರ ಮಾಸ್ತಿ ಮೊಗೇರ್ ಎಂದು ಗುರುತಿಸಲಾಗಿದೆ. ಈತನು ಮಾವಿನಕಟ್ಟಾದ ಬೈರುಮನೆ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಬಿಳಿ ಚೀಟಿಯಲ್ಲಿ ಅಂಕೆ ಸಂಖ್ಯೆ ಬರೆದು ಓಸಿ ಮಟ್ಕಾ ಜೂಗಾರಾಟ ನಡೆಸುತ್ತಿದ್ದಾನೆಂಬ ಖಚಿತ ಮಾಹಿತಿಯ ಮೇರೆಗೆ ಪಿಎಸೈ ಹನುಮಂತ ಬಿರಾದಾರ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತು.
ದಾಳಿಯ ವೇಳೆ ಓಸಿ ಮಟ್ಕಾ ಚೀಟಿಗಳು ಹಾಗೂ ?510 ನಗದು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ